70ನೇ ಗಣರಾಜ್ಯೋತ್ಸವ ಸಂಭ್ರಮ- ಸಕಲ ರೀತಿಯಲ್ಲೂ ರಾಜಪಥ್ ರೆಡಿ

ನವದೆಹಲಿ: ಇಂದು 70ನೇ ಗಣರಾಜ್ಯೋತ್ಸವದ ಸಂಭ್ರಮ. ರಾಷ್ಟ್ರ ರಾಜಧಾನಿ ನವದೆಹಲಿಯ ರಾಜಪಥ್ ರಸ್ತೆ ಕಾರ್ಯಕ್ರಮಕ್ಕೆ ಸಕಲ ರೀತಿಯಲ್ಲೂ ಸಜ್ಜಾಗಿದೆ.

ದಟ್ಟ ಮಂಜು ಹಿನ್ನೆಲೆಯಲ್ಲಿ ಬೆಳಗ್ಗೆ 10ರಿಂದ ಕಾರ್ಯಕ್ರಮಗಳು ಆರಂಭವಾಗಲಿದೆ. ಈ ಬಾರಿ ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಾಫೋಸಾ ಗಣರಾಜೋತ್ಸವದ ಅತಿಥಿ ಆಗಿದ್ದಾರೆ. ಇಂಡಿಯಾ ಗೇಟ್‍ನಲ್ಲಿರುವ ಅಮರ್ ಜವಾನ್ ಜ್ಯೋತಿ ಬಳಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಬಳಿಕ ಪ್ರಧಾನಿ, ಅತಿಥಿ, ಗಣ್ಯರ ಸಮ್ಮುಖದಲ್ಲಿ ರಾಷ್ಟ್ರಪತಿ ಕೋವಿಂದ್ ಧ್ವಜಾರೋಹಣ ಮಾಡಲಿದ್ದಾರೆ. ಇದನ್ನೂ ಓದಿ: ದೇಶದ ಹಬ್ಬಕ್ಕೆ ಕ್ಷಣಗಣನೆ : ಸಿಂಗಾರಗೊಂಡಿದೆ ರಾಜಪಥ್: ಈ ಬಾರಿಯ ಪರೇಡ್ ವಿಶೇಷತೆ ಏನು?

ಈ ಬಾರಿ 16 ರಾಜ್ಯಗಳ ಮತ್ತು 6 ಇಲಾಖೆಗಳ ಒಟ್ಟು 22 ಸ್ತಬ್ಧ ಚಿತ್ರಗಳು ಪ್ರದರ್ಶನವಾಗುತ್ತಿದೆ. ಗಾಂಧೀಜಿ 150ನೇ ಜನ್ಮದಿನದ ಹಿನ್ನೆಲೆ ಸ್ತಬ್ಧ ಚಿತ್ರಗಳಲ್ಲಿ ವಿಶೇಷ ಗೌರವ ಸಲ್ಲಿಸಲಾಗುತ್ತಿದೆ. ಬೆಂಗಳೂರಿನ ಗೋಕುಲ್ ಎಕ್ಸ್ ಟೆನ್ಷನ್‍ನ ನಾವ್ಕೀಸ್ ಶಾಲೆಯ ವಿದ್ಯಾರ್ಥಿನಿ ದೇವಿಕಾ ಸಂತೋಷ್‍ಗೆ ಪ್ರ್ರಧಾನ ಮಂತ್ರಿ ಬಾಕ್ಸ್ ನಲ್ಲಿ ಕುಳಿತು ಪರೇಡ್ ವೀಕ್ಷಿಸುವ ಅವಕಾಶ ಸಿಕ್ಕಿದೆ.

ಕಳೆದ ವರ್ಷದ ಸಿಬಿಎಸ್‍ಇ 10ನೇ ತರಗತಿಯಲ್ಲಿ ದೇವಿಕಾ ದೇಶಕ್ಕೇ ಅತೀ ಹೆಚ್ಚು ಅಂಕಗಳನ್ನು ಪಡೆದಿದ್ದರು. ಉಗ್ರರ ಕರಿನೆರಳಿನ ಭೀತಿಯಿಂದ ಎಲ್ಲೆಡೆ ಹದ್ದಿನ ಕಣ್ಣಿಡಲಾಗಿದೆ. ಇದನ್ನೂ ಓದಿ: ಫಸ್ಟ್ ಟೈಂ ಆರ್‌ಡಿಯಲ್ಲಿ ಪುರುಷ ದಳವನ್ನು ಮುನ್ನಡೆಸಲಿದ್ದಾರೆ ಮಹಿಳಾ ಅಧಿಕಾರಿ

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *