ದಿನಕ್ಕೆ 17 ರೂ. ನೀಡಿ ರೈತರಿಗೆ ಅವಮಾನ: ರಾಹುಲ್ ಗಾಂಧಿ ಕಿಡಿ

ನವದೆಹಲಿ: ಕೇಂದ್ರ ಸರ್ಕಾರದ ಬಜೆಟ್‍ನಲ್ಲಿ ರೈತರಿಗೆ ದಿನಕ್ಕೆ 17 ರೂ. ನೀಡಿ ಅವಮಾನ ಮಾಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ಬಜೆಟ್ ಬಳಿಕ ಟ್ವೀಟ್ ಮಾಡಿದ ರಾಹುಲ್ ಗಾಂಧಿ ಅವರು, ಡಿಯರ್ ನಮೋ(ಓoಒo), ಐದು ವರ್ಷಗಳಿಂದ ನೀಡುತ್ತಿರುವ ನಿಮ್ಮ ಅಸಮರ್ಥತೆ ಹಾಗೂ ಅಹಂಕಾರ ರೈತರ ಜೀವನವನ್ನು ನಾಶಗೊಳಿಸುತ್ತಿದೆ. ಒಂದು ದಿನಕ್ಕೆ ರೈತರಿಗೆ 17 ರೂ. ನೀಡುತ್ತಿರುವುದು ಅವರಿಗೆ ಹಾಗೂ ಅವರ ಕೆಲಸಕ್ಕೆ ಮಾಡುವ ಅವಮಾನ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕುಟುಕಿದ್ದಾರೆ.

ಕೇಂದ್ರ ಬಜೆಟ್‍ನಲ್ಲಿರುವ “ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ನಿಧಿ” ವಿರುದ್ಧ ಭಾರೀ ವಿರೋಧ ವ್ಯಕ್ತವಾಗಿದೆ. ರಾಹುಲ್ ಗಾಂಧಿ, ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಸೇರಿದಂತೆ ನಾಯಕರು ಕೇಂದ್ರದ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಯೋಜನೆಯಲ್ಲಿ ಏನಿದೆ?:
5 ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರಿಗೆ ಪ್ರತಿ ವರ್ಷಕ್ಕೆ 6,000 ರೂ. ಬೆಂಬಲ ನೀಡುವುದಾಗಿ ಬಜೆಟ್‍ನಲ್ಲಿ ಘೋಷಣೆ ಮಾಡಲಾಗಿದೆ. ಈ ಹಣವನ್ನು ಒಂದು ದಿನಕ್ಕೆ ಲೆಕ್ಕ ಹಾಕಿರುವ ಕಾಂಗ್ರೆಸ್, ರೈತರಿಗೆ ಕೇವಲ 17 ರೂ. ಸಿಗುತ್ತದೆ. ಇದು ರೈತರಿಗೆ ಹಾಗೂ ಅವರ ಶ್ರಮಕ್ಕೆ ಮಾಡುವ ಅವಮಾನ ಎಂದು ಕಿಡಿಕಾರಿದೆ.

ಕೇಂದ್ರ ಸರ್ಕಾರದ ಬಜೆಟ್ ಘೋಷಣೆ ಹಾಗೂ ರಾಹುಲ್ ಗಾಂಧಿ ಹೇಳಿಕೆಯ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಮೆಂಟ್ ಮಾಡಿ ತಿಳಿಸಿ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

Comments

Leave a Reply

Your email address will not be published. Required fields are marked *