‘ಚಂಬಲ್’ನಲ್ಲಿ ಅಡಗಿದ್ಯಾ ಡಿ.ಕೆ.ರವಿ ಸಾವಿನ ರಹಸ್ಯ – ಸತೀಶ್ ನೀನಾಸಂ ಹೇಳಿದ್ದೇನು?

ಬೆಂಗಳೂರು: ನಟ ಸತೀಶ್ ನೀನಾಸಂ ಅಭಿನಯದ ‘ಚಂಬಲ್’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಪ್ರೇಕ್ಷಕರು ಇದು ದಕ್ಷ, ಪ್ರಾಮಾಣಿಕ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಜೀವನದ ಕಥೆ ಆಧಾರಿತ ಸಿನಿಮಾವಾಗಿದೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ನಟ ಸತೀಶ್ ನೀನಾಸಂ ಮಾತನಾಡಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ನಟ ಸತೀಶ್ ನೀನಾಸಂ, ‘ಚಂಬಲ್’ ಸಿನಿಮಾ ಒಬ್ಬ ಐಎಎಸ್ ದಕ್ಷ ಅಧಿಕಾರಿ ಕಥೆಯಾಗಿದೆ. ನಾನು ಈ ಸಿನಿಮಾದಲ್ಲಿ ಸುಭಾಶ್ ಎಂಬ ಪಾತ್ರ ಮಾಡುತ್ತಿದ್ದೇನೆ. ನಾನು ಮಾಡಿದ ಸಿನಿಮಾದಲ್ಲಿ ನನಗೆ ಶಿಕ್ಷಣ ಇರುತ್ತಿರಲಿಲ್ಲ. ಆದರೆ ಈ ಸಿನಿಮಾದಲ್ಲಿ ಒಳ್ಳೆಯ ಶಿಕ್ಷಣ ಇದ್ದು, ಐಎಎಸ್ ಅಧಿಕಾರಿಯಾಗಿದ್ದೇನೆ. ನಾನು ಎಸ್‍ಎಸ್‍ಎಲ್‍ಸಿ ಮಾಡಿ, ಡಿಪ್ಲೋಮಾ ಮಾಡಿದ್ದೇನೆ. ಆದರೆ ಈ ಸಿನಿಮಾದಲ್ಲಿ ನಾನು ಓದಿರುವುದಕ್ಕೂ, ಇದಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ತುಂಬಾ ಕಷ್ಟಪಟ್ಟು ಸಿನಿಮಾ ಮಾಡಿದ್ದೇವೆ ಎಂದು ತಿಳಿಸಿದ್ರು.

ಚಿತ್ರದ ಕಥೆಗಾಗಿ ಕೆಲವು ಅಧಿಕಾರಿಗಳಿಂದ ಸ್ಪೂರ್ತಿ ಪಡೆದುಕೊಂಡಿದ್ದೇವೆ. ಆದರೆ ಯಾರು ಏನು ಎಂದು ಹೇಳಲು ಸಾಧ್ಯವಿಲ್ಲ. ಆದರೆ ಇದು ಒಬ್ಬ ಐಎಎಸ್ ಅಧಿಕಾರಿಯ ಕಥೆಯಾಗಿದೆ. ನಮ್ಮಲ್ಲಿ ಒಳ್ಳೆಯ ಅಧಿಕಾರಿಗಳಿದ್ದು, ಕೆಲಸ ಮಾಡಿದ್ದಾರೆ. ಆದ್ದರಿಂದ ಈ ಸಿನಿಮಾ ಮಾಡಿದ್ದೇವೆ. ಲೂಸಿಯಾ ನಂತರ ಇದು ಒಂದೊಂದು ಅದ್ಭುತವಾದ ಸಿನಿಮಾವಾಗಿದೆ. ನಾವು ಕಾಣುವ ಸತ್ಯಕ್ಕಿಂತ, ನೀವು ಕಾಣುವ ಸತ್ಯವೇ ಮುಖ್ಯವಾಗಿದೆ. ಟ್ರೇಲರ್ ನೋಡಿ, ಬಳಿಕ ಸಿನಿಮಾ ನೋಡಿ ಎಂದು ಸತೀಶ್ ಹೇಳಿದ್ದಾರೆ.

ಚಂಬಲ್ ಅನ್ನೋ ಹೆಸರಿನ ಸುತ್ತಾ ನಾನಾ ನಿಗೂಢಗಳು ಅಡಗಿಕೊಂಡಿವೆ. ಒಂದಷ್ಟು ಕ್ರೈಮುಗಳ ಸರಣಿಯೂ ಕಣ್ಮುಂದೆ ಸುಳಿದಾಡುತ್ತೆ. ಅದೇ ಹೆಸರನ್ನು ಶೀರ್ಷಿಕೆಯಾಗಿಸಿಕೊಂಡಿರೋ ಚಂಬಲ್ ಚಿತ್ರದ ಬಗ್ಗೆ ನಾನಾ ಕುತೂಹಲಗಳಿವೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಈ ಚಿತ್ರದ ಟೃಲರ್ ಬಿಡುಗಡೆ ಮಾಡಿದ್ದಾರೆ.

ಸತೀಶ್ ನೀನಾಸಂ ಈ ಚಿತ್ರದಲ್ಲಿ ಭ್ರಷ್ಟಾಚಾರಿಗಳನ್ನ ಕಂಡ್ರೆ ಬೆಂಕಿಯುಂಡೆಯಂತಾಡೋ ಖಡಕ್ ಅಧಿಕಾರಿಯಾಗಿ ನಟಿಸಿರೋದರ ಸುಳಿವೂ ಕೂಡಾ ಸಿಕ್ಕಿದೆ. ಪ್ರತೀ ಹಂತದಲ್ಲಿಯೂ ಪ್ರೇಕ್ಷಕರನ್ನ ನಿಗಿ ನಿಗಿಸೋ ಕ್ಯೂರಿಯಾಸಿಟಿಯ ಕೆಂಡದ ಮೇಲೆ ತಂದು ಕೂರಿಸುವಂತೆ ಇಡೀ ಚಿತ್ರ ಮೂಡಿ ಬಂದಿದೆ ಎಂಬುದಕ್ಕೆ ಈ ಟ್ರೇಲರ್ ಸಾಕ್ಷಿಯೊದಗಿಸುತ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

Comments

Leave a Reply

Your email address will not be published. Required fields are marked *