ಕೊಪ್ಪಳದಲ್ಲಿ ಸಾರ್ವಜನಿಕರಿಂದಲೇ ಕೆರೆ ಹೊಳೆತ್ತುವ ಕಾಮಗಾರಿ!

– ಸಾಮಾಜಿಕ ಜಾಲತಾಣದಲ್ಲಿ ಸಾಕ್ಷ್ಯಚಿತ್ರ ವೈರಲ್

ಕೊಪ್ಪಳ: ಸಾರ್ವಜನಿಕರಿಂದಲೇ ಕೆರೆಯ ಹೂಳೆತ್ತುವ ಕಾಮಗಾರಿಗೆ ಇಂದು ಅಭಿನವ ಗವಿ ಸಿದ್ದೇಶ್ವರ ಶ್ರೀಗಳು ಜಿಲ್ಲೆಯ ಕುಷ್ಟಗಿ ತಾಲೂಕಿನ ನಿಡಶೇಷಿಯಲ್ಲಿ ಚಾಲನೆ ನೀಡಲಿದ್ದಾರೆ.

ಕುಷ್ಟಗಿ ತಾಲೂಕಿನ ನಿಡಶೇಷಿಯಲ್ಲಿರುವ ಕೆರೆಯನ್ನು ಸಾರ್ವಜನಿಕರು ಹಣ ಸಂಗ್ರಹಿಸಿ ಹೂಳು ತೆಗೆಯೋ ಕಾರ್ಯಕ್ಕೆ ಮುಂದಾಗಿದ್ದಾರೆ. ನಮ್ಮ ಕೆರೆ ನಮ್ಮ ಕುಷ್ಟಗಿ, `ಕೆರೆ ಉಳಿಸಿ ಜೀವ ಸಂಕುಲ ಉಳಿಸಿ’ ಎಂಬ ಧ್ಯೇಯ ವಾಕ್ಯದೊಂದಿಗೆ ಸಮಾನಮನಸ್ಕರು ಕೂಡಿ ಕೆರೆ ಹೂಳೆತ್ತುವ ಕಾರ್ಯಕ್ಕೆ ಕೈ ಹಾಕಿದ್ದಾರೆ. ಅಷ್ಟೇ ಅಲ್ಲದೆ ಈ ಕುರಿತು ವನ್ಯಜೀವಿ ಛಾಯಾಗ್ರಾಹಕರಾಗಿರುವ ಸುಜಿತ್ ಶೆಟ್ಟರ್ ಅವರು ಡ್ರೋನ್ ಕ್ಯಾಮೆರಾ ಮೂಲಕ ಕೆರೆಯ ದೃಶ್ಯಗಳನ್ನು ಸೆರೆಹಿಡಿದಿದ್ದಾರೆ. ಈ ದೃಶ್ಯಗಳನ್ನು ಬಳಸಿಕೊಂಡು ಸಾಕ್ಷ್ಯ ಚಿತ್ರ ಕೂಡ ತಯಾರು ಮಾಡಲಾಗಿದೆ.

ಸುಮಾರು 1.59 ನಿಮಿಷದ ಸಾಕ್ಷ್ಯಚಿತ್ರ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರಿಂದ ಸಾಕ್ಷ್ಯಚಿತ್ರಕ್ಕೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಇನ್ನೂ 45 ದಿನಗಳ ಕಾಲ ಕೊಪ್ಪಳದ ಗವಿ ಸಿದ್ದೇಶ್ವರ ಮಠ ಹೂಳೆತ್ತುವ ಜನರಿಗೆ ನಿರಂತರವಾಗಿ ದಾಸೋಹ ಕಲ್ಪಿಸಿದೆ. ಮಠದಿಂದ ನಿಡಶೇಷಿಯಲ್ಲಿ ದಾಸೋಹ ಕಲ್ಪಿಸಲಾಗಿದ್ದು, ಈ ಮೂಲಕ ಗವಿ ಮಠವೂ ಕೆರೆ ಹೂಳೆತ್ತುವ ಜನರೊಂದಿಗೆ ಕೈ ಜೋಡಿಸಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *