ಸಿದ್ದಗಂಗಾ ಮಠಕ್ಕೆ ನಟ ಶಿವರಾಜ್‍ಕುಮಾರ್ ಭೇಟಿ

ತುಮಕೂರು: ಹ್ಯಾಟ್ರಿಕ್ ಹೀರೋ ನಟ ಶಿವರಾಜ್‍ಕುಮಾರ್ ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟು ಶಿವೈಕ್ಯರಾದ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದಿದ್ದಾರೆ.

ಶಿವರಾಜ್‍ಕುಮಾರ್ ಅವರು ಗದ್ದುಗೆ ದ್ವಾರದ ಮುಂದೆ ಕೆಲಕಾಲ ಕೂತು ನಮಸ್ಕರಿಸಿದರು. ಬಳಿಕ ಹೊಸ ಮಠಕ್ಕೆ ಬಂದು ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಇದೇ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಶಿವಣ್ಣ, “ಶಿವಕುಮಾರ ಶ್ರೀಗಳು ದೂರವಾದಾಗ ನಾನು ವಿದೇಶದಲ್ಲಿ ಇದ್ದೆ. ಹಾಗಾಗಿ ಬರಲು ಆಗಲಿಲ್ಲ. ಶ್ರೀಗಳು ಮೇಲೆ ಪ್ರೀತಿ ಹಾಗೂ ನಂಟು ಇತ್ತು. ಹಾಗಾಗಿ ಇಂದು ಬಂದು ಗದ್ದುಗೆ ದರ್ಶನ ಪಡೆದಿದ್ದೇನೆ” ಎಂದರು. ಅಲ್ಲದೇ ನಾನು ಇನ್ನು ಮುಂದೆ ಬರುತ್ತಿರುತ್ತೇನೆ. ಶಿವಕುಮಾರ ಶ್ರೀಗಳು ಇನ್ನೂ ನಮ್ಮ ಜೊತೆಯೇ ಇದ್ದಾರೆ ಎನ್ನುವ ಫೀಲ್ ಆಗುತ್ತಿದೆ ಎಂದು ಪ್ರತಿಕ್ರಿಯಿಸಿದರು. ಈ ನಡುವೆ ಎಂದಿನಂತೆ ತಮ್ಮ ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು.

ಇತ್ತೀಚೆಗೆ ನಟ ಉಪೇಂದ್ರ ಕೂಡ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದರು. ಮೊದಲಿಗೆ ಗದ್ದುಗೆಗೆ ಹೋಗಿ ಅಲ್ಲಿ ಶ್ರೀಗಳಿಗೆ ಪೂಜೆ ಸಲ್ಲಿಸಿ ನಮಸ್ಕರಿಸಿದ್ದರು. ಬಳಿಕ ಕೆಲಕಾಲ ಸಿದ್ದಲಿಂಗಸ್ವಾಮಿಗಳ ಜೊತೆ ಕುಳಿತು ಉಭಯಕುಶಲೋಪರಿ ನಡೆಸಿದ್ದರು. ತದನಂತರ ಮಾಧ್ಯಮಗಳ ಜೊತೆ ಮಾತನಾಡಿದ ಉಪೇಂದ್ರ, ಹುಬ್ಬಳ್ಳಿಯಲ್ಲಿ ಒಂದು ಪ್ರೆಸ್ ಮೀಟ್ ಇದೆ, ಅದಕ್ಕೆ ಹೊರಟ್ಟಿದ್ದೆ. ಈ ಕಡೆಯಿಂದ ಹೋಗಬೇಕಾದರೆ ಇಲ್ಲಿಗೆ ಬಂದು ಭೇಟಿ ಕೊಟ್ಟು ಹೋಗುವುದು ಒಂದು ಸಂಪ್ರದಾಯವಾಗಿದೆ. ಅಲ್ಲದೇ ಈ ಹಿಂದೆ ದೇವರಿದ್ದಾಗ ಮಠಕ್ಕೆ ಬಂದಿದ್ದೆ, ಈಗ ಅವರ ಆತ್ಮವಿದ್ದಾಗ ಬಂದಿದ್ದೇನೆ. ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟಾಗಲೆಲ್ಲಾ ಸಂತೋಷವಾಗುತ್ತದೆ. ಯಾಕೆಂದರೆ ಆನಂದ, ಅನುಭೂತಿ ದೊರೆಯುತ್ತದೆ ಎಂದು ತಮ್ಮ ಅನುಭವವನ್ನು ಹಂಚಿಕೊಂಡಿದ್ದರು.

https://www.youtube.com/watch?v=XdztOfmtLT4

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *