ಕೆಚ್ಚೆದೆಯ ಯೋಧರ ತ್ಯಾಗವನ್ನು ವ್ಯರ್ಥವಾಗಲು ಬಿಡಲ್ಲ: ಪ್ರಧಾನಿ ಮೋದಿ

ನವದೆಹಲಿ: ಕೆಚ್ಚೆದೆಯ ಭಾರತೀಯ ಯೋಧರ ತ್ಯಾಗವನ್ನು ವ್ಯರ್ಥವಾಗಲು ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ನರೇಂದ್ರ ಮೋದಿ, ಉಗ್ರರ ದಾಳಿ ವಿರುದ್ಧ ಕಿಡಿಕಾರಿದ್ದಾರೆ.

ಟ್ವೀಟ್ ಮೂಲಕ ಉಗ್ರರ ವಿರುದ್ಧ ಗುಡುಗಿರುವ ಪ್ರಧಾನಿ ಮೋದಿ, ಪುಲ್ವಾಮದಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ದಾಳಿ ನಡೆಸಿರುವುದು ತೀವ್ರವಾಗಿ ಖಂಡಿಸುತ್ತೇನೆ. ಹುತಾತ್ಮ ಯೋಧರ ಕುಟುಂಬದ ಜೊತೆಗೆ ಈಡಿ ದೇಶವೇ ನಿಂತಿದೆ. ಗಾಯಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಈ ವಿಡಿಯೋ ರಿಲೀಸ್ ಆಗೋ ವೇಳೆ ನಾನು ಸ್ವರ್ಗದಲ್ಲಿ ಇರ್ತೀನಿ: ನರಹಂತಕ ಉಗ್ರ

ಈ ದಾಳಿಯ ಕುರಿತು ಕೇಂದ್ರ ಗೃಹ ಸಚಿವ ರಾಜ್‍ನಾಥ್ ಸಿಂಗ್ ಹಾಗೂ ಉನ್ನತ ಅಧಿಕಾರಗಳ ಜೊತೆಗೆ ಮಾತುಕತೆ ನಡೆಸಿದ್ದೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಕಾರು ಡಿಕ್ಕಿ ಹೊಡೆದ ನಂತ್ರ ಗುಂಡಿನ ದಾಳಿ: 2,547 ಸೈನಿಕರು ಟಾರ್ಗೆಟ್, 100 ಮೀಟರ್ ದೂರಕ್ಕೆ ಹಾರಿತು ದೇಹ!

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೊವೆಲ್ ಅವರ ಜೊತೆ ಪ್ರಧಾನಿ ನರೇಂದ್ರ ಮೋದಿ ಚರ್ಚೆ ಆರಂಭಿಸಿದ್ದಾರೆ. ಈಗಾಗಲೇ ಉನ್ನತ ಅಧಿಕಾರಿಗಳು ದೆಹಲಿ ಕಡೆಗೆ ಆಗಮಿಸುತ್ತಿದ್ದು, ಮುಂದಿನ ಕ್ರಮಕ್ಕೆ ಮಾತುಕತೆ ನಡೆಸಲಿದ್ದಾರೆ ಎಂದು ಸರ್ಕಾರ ಮೂಲಗಳಿಂದ ತಿಳಿದುಬಂದಿದೆ.

ಗೃಹ ಇಲಾಖೆಯ ಕಾರ್ಯದರ್ಶಿ ರಾಜೀವ್ ಗೌಭ ವಾರ್ಷಿಕ ಕಾರ್ಯದರ್ಶಿಗಳ ಮಾತುಕತೆಗೆ ಭುತಾನ್‍ಗೆ ಇಂದು ತೆರಳಿದ್ದರು. ಉಗ್ರರ ದಾಳಿ ಬಳಿಕ ಭುತಾನ್‍ನಿಂದ ಭಾರತಕ್ಕೆ ಮರಳಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *