ಬೆಂಗಳೂರು: ಕಾಂಗ್ರೆಸ್ ಪಕ್ಷದವರಿಗೆ ಮಕ್ಕಳಗದಿದ್ದರೂ ಅವರು ಬಿಜೆಪಿಗೇ ಬೈತಾರೆ ಎಂದು ಶಾಸಕ ಅರವಿಂದ ಲಿಂಬಾವಳಿಯವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಪಾರ್ಟಿಯವರು ನಮ್ಮನ್ನೇ ದೂಷಿಸುತ್ತಾರೆ. ಮಕ್ಕಳಾಗದಿದ್ದರೂ ಅವರು ಬಿಜೆಪಿಯನ್ನೇ ಬೈತಾರೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ಅವರು ಅರ್ಥಮಾಡಿಕೊಳ್ಳಬೇಕು. ಬಾಯಿಗೆ ಬಂದಂತೆ ಮಾತನಾಡೋದು ಅಲ್ಲ. ಅವರ ಪಕ್ಷವನ್ನು ಸರಿಯಾಗಿ ಇಟ್ಟುಕೊಳ್ಳಲ್ಲ. ಇನ್ನು ಬಿಜೆಪಿ ಮೇಲೆ ಹರಿಹಾಯ್ದರೆ ಜನ ಏನು ನಂಬಲ್ಲ ಅಂದುಕೊಂಡಿದ್ರಾ ಎಂದು ಪ್ರಶ್ನಿಸಿದ್ದಾರೆ.

ಅವರ ಪಕ್ಷದ ಶಾಸಕರನ್ನು ಅವರು ಹೆಂಗೆ ನಡೆಸಿಕೊಂಡಿದ್ದಾರೆ ಎಂಬುದು ಗೊತ್ತಿದೆಯಾ. ಈ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲವೆಂದು ಶಾಸಕರು ಅಸಮಾಧಾನ ವ್ಯಕ್ತಪಡಿಸುತ್ತಾನೆ ಇದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿಯೂ ಅಸಮಾಧಾನಗಳು ವ್ಯಕ್ತವಾಯಿತು. ಶಾಸಕ ಆನಂದ್ ಸಿಂಗ್ ಹಾಗೂ ಕಂಪ್ಲಿ ಗಣೇಶ್ ಮಧ್ಯೆ ಹೊಡೆದಾಟವೇ ನಡೆಯಿತು. ಅವುಗಳನ್ನು ನಿಭಾಯಿಸಲು ಸಾಧ್ಯವಾಗದಿದ್ದವರೂ ಅನಗತ್ಯವಾಗಿ ಬಿಜೆಪಿ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದ್ರು.
ಒಟ್ಟಿನಲ್ಲಿ ಅವರೊಳಗೆ ಹುಳುಕನ್ನು ಮುಚ್ಚಿಕೊಳ್ಳುವ ಸಲುವಾಗಿ ಬಿಜೆಪಿ ಮೇಲೆ ಆರೋಪ ಮಾಡುವುದು ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷಗಿರಿಗೆ ಶೋಭೆ ತರುವಂತದ್ದಲ್ಲ ಎಂದು ಗರಂ ಆದ್ರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv

Leave a Reply