8 ಮಂದಿ ಗೆಳೆಯರ ಜೊತೆ ಸೇರಿ ಪತ್ನಿಯನ್ನೇ ಪೀಸ್ ಪೀಸ್ ಮಾಡ್ದ..!

ಚೆನ್ನೈ: ಪರ ಪುರುಷರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಅನುಮಾನಗೊಂಡ ಪತಿಯೊಬ್ಬ ತನ್ನ ಸ್ನೇಹಿತರ ಸಹಾಯದಿಂದಲೇ ಪತ್ನಿಯನ್ನು ಪೀಸ್ ಪೀಸ್ ಮಾಡಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಗಂಗಾ ಮೃತ ದುರ್ದೈವಿ. ಪ್ರಮುಖ ಆರೋಪಿ ಪತಿಯನ್ನು ರಾಜಶೇಖರ್ ಎಂದು ಗುರುತಿಸಲಾಗಿದೆ. ಈತ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಕಲ್ಲೂರು ಜಿಲ್ಲೆಯ ನೆಲ್ಲಿಪ್ಕುಪ್ಪಂ ಬಳಿಯ ವಝಪಟ್ಟು ಗ್ರಾಮದ ನಿವಾಸಿಯಾಗಿದ್ದ ಗಂಗಾಳನ್ನು ಪ್ರೀತಿಸುತ್ತಿದ್ದನು. ಇವರಿಬ್ಬರು ಪ್ರೀತಿಸಿ ಆರು ವರ್ಷಗಳ ಹಿಂದೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಏನಿದು ಪ್ರಕರಣ?
ಆರೋಪಿ ರಾಜಶೇಖರ್ ಚಾಲಕನಾಗಿದ್ದರಿಂದ ಆಗಾಗ ನಗರದಿಂದ ಹೊರಗೆ ಟ್ರಾವೆಲ್ ಮಾಡುತ್ತಿದ್ದು, ಈ ಕಾರಣದಿಂದ ಆರೋಪಿ ಮನೆಯಿಂದ ದೂರವಿರುತ್ತಿದ್ದನು. ಈ ವೇಳೆ ಪತಿ ಪಟ್ಟಣದಿಂದ ಹೊರಗೆ ಹೋದಾಗ ಗಂಗಾ ಇತರ ಪುರುಷರೊಂದಿಗೆ ಸಂಬಂಧವನ್ನು ಬೆಳೆಸಿಕೊಂಡಿದ್ದಳು ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೆ ಈ ವಿಷಯ ಪತಿಗೆ ತಿಳಿದಿದ್ದು, ಆಗಾಗ ದಂಪತಿ ನಡುವೆ ಜಗಳವಾಗುತ್ತಿತ್ತು.

ದಂಪತಿಯ ಜಗಳ ಕೊನೆಗೆ ನ್ಯಾಯಾಲಯದ ಮೆಟ್ಟಿಲೇರಿದ್ದು, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ನಂತರ ಗಂಗಾ ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ಪತಿಯಿಂದ ಬೇರೆಯಾಗಿ ಮಧುಕ್ಕರೈನಲ್ಲಿ ವಾಸಿಸುತ್ತಿದ್ದಳು. ಬಳಿಕ ರಾಜಶೇಖರ್ ಮಕ್ಕಳನ್ನು ಬಿಟ್ಟಿರಲಾರದೆ ಒಟ್ಟಿಗೆ ವಾಸಿಸಲು ನಿರ್ಧರಿಸಿ ಪತ್ನಿಯ ಮನೆಗೆ ಹೋಗಿದ್ದನು. ಆದರೆ ಮಾರ್ಚ್ 1 ರಂದು ಗಂಗಾ ಅಂಗಡಿಯಿಂದ ಹಾಲನ್ನು ಖರೀದಿಸಿ ಮನೆಗೆ ಹಿಂದಿರುಗುತ್ತಿದ್ದಾಗ ರಾಜಶೇಖರ್ ಮತ್ತು ಎಂಟು ಮಂದಿ ಗೆಳೆಯರು ಸೇರಿ ಆಕೆಯ ಮೇಲೆ ಹಲ್ಲೆ ಮಾಡಿ ಪೀಸ್ ಪೀಸ್ ಮಾಡುವ ಮೂಲಕ ಕೊಲೆ ಮಾಡಿದ್ದಾರೆ.

ಈ ಕೊಲೆಯ ಬಗ್ಗೆ ಮಾಹಿತಿ ತಿಳಿದ ಮಧುಕ್ಕರೈ ಪೊಲೀಸರು ತನಿಖೆಗೆ ಬಂದಾಗ ರಾಜಶೇಖರ್ ಅವರ ಮನೆಯಲ್ಲಿ ನಿದ್ದೆ ಮಾಡುತ್ತಿದ್ದನು. ಇದರಿಂದ ಪೊಲೀಸರು ಆತನ ಮೇಲೆ ಅನುಮಾನಗೊಂಡು ಆತನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ.

ಆರೋಪಿ ರಾಜಶೇಖರ್ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿ ತನ್ನ ಸ್ನೇಹಿತರ ಜೊತೆ ಪತ್ನಿ ಅನೇಕ ಪುರುಷರ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ಹೇಳಿದ್ದಾನೆ. ಇದರಿಂದ ರಾಜಶೇಖರ್ ಮತ್ತು ಅವರ ಸ್ನೇಹಿತರು ಗಂಗಾಳನ್ನು ಕೊಲೆ ಮಾಡಲು ನಿರ್ಧರಿಸಿ ಹತ್ಯೆ ಮಾಡಿದ್ದಾರೆ. ಈ ಕುರಿತು ಕೊಲೆ ಪ್ರಕರಣ ದಾಖಲಾಗಿದ್ದು, ರಾಜಶೇಖರ್ ಮತ್ತು ಆತನ ಸ್ನೇಹಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಹೇಳಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *