ಇನ್ನೆರಡು ದಿನ ಹೆಚ್ಚಾಗಲಿದೆ ಬಿಸಿಗಾಳಿ ಪ್ರಭಾವ!

ಬೆಂಗಳೂರು: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಇನ್ನೆರಡು ದಿನಗಳಲ್ಲಿ ಬಿಸಿಗಾಳಿ ಪ್ರಭಾವ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ತಮಿಳುನಾಡು, ಕೇರಳ, ಆಂಧ್ರದ ರಾಯಲ್ ಸೀಮಾ ಪ್ರದೇಶಗಳಲ್ಲಿ ಉಷ್ಣಾಂಶ ಹೆಚ್ಚಿದ್ದು ಈ ಭಾಗದಲ್ಲಿ 40 ಡಿಗ್ರಿಗೆ ಏರಿದೆ. ಈ ರಾಜ್ಯಗಳಿಗೆ ಹೊಂದಿ ಕೊಂಡಂತಿರುವ ಕರ್ನಾಟಕದ ಗಡಿ ಜಿಲ್ಲೆಗಳಾದ ಕಲಬುರಗಿ, ಕೋಲಾರ, ಚಾಮರಾಜನಗರ ಭಾಗಗಳಲ್ಲಿ ವಾಡಿಕೆಗಿಂತ 2 ರಿಂದ 3 ಡಿಗ್ರಿ ಉಷ್ಣಾಂಶ ಹೆಚ್ಚಾಗಲಿದೆ ಎಂದು ಎಚ್ಚರಿಸಿದೆ.

ಬಿಸಿಗಾಳಿ ತಾಪದಿಂದ ಜನರು ತತ್ತರಿಸಿ ಹೋಗಿದ್ದಾರೆ. ಬೇಸಿಗೆ ಆರಂಭದಲ್ಲೇ ಬಿಸಿಲಿನ ಪ್ರಭಾವ ಹೆಚ್ಚಾಗಿದ್ದು, ಉತ್ತರ ಭಾರತದಲ್ಲಿ ಚಳಿಗಾಲ ಹೆಚ್ಚುವರಿ ಅವಧಿಗೆ ವಿಸ್ತರಣೆಗೆ ಕಾರಣವಾಗಿದೆ. ಜಮ್ಮು ಕಾಶ್ಮೀರದ ಹಿಮ ಪರ್ವತ ಶ್ರೇಣಿಗಳಲ್ಲಿ ಹಿಮ ಸುರಿಯುತ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *