ಸವಾಲಾಗಿ ಸ್ವೀಕರಿಸಿ ಅಭಿವೃದ್ಧಿ ಮಾಡ್ತೀನಿ: ಶೋಭಾ ಕರಂದ್ಲಾಜೆ

ಉಡುಪಿ: ಟಿಕೆಟ್ ಸಿಗುತ್ತೆ, ಸಿಗಲ್ಲ ಎಂದು ಸಾಕಷ್ಟು ಚೌಕಾಶಿ ನಡೆದು ಕೊನೆಗೂ ಉಡುಪಿ- ಚಿಕ್ಕಮಗಳೂರು ಲೋಕಸಭಾ ಟಿಕೆಟ್ ಶೋಭಾ ಕರಂದ್ಲಾಜೆ ಪಾಲಾಗಿದೆ. ಟಿಕೆಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಸಂಸದೆ ಶೋಭಾ ಪ್ರತಿಕ್ರಿಯೆ ನೀಡಿದ್ದಾರೆ.

ರಾಷ್ಟ್ರ ಮತ್ತು ರಾಜ್ಯ ನಾಯಕರಿಗೆ ನನ್ನ ಧನ್ಯವಾದ. ವಿಶ್ವಾಸವಿಟ್ಟು ಮತ್ತೊಮ್ಮೆ ಅವಕಾಶ ನೀಡಿದ್ದಾರೆ. ನಾವು ಒಗ್ಗಟ್ಟಾಗಿ ಬಿಜೆಪಿ ರಥ ಎಳೆಯುತ್ತೇವೆ. ದೇಶಾದ್ಯಂತ ಬಿಜೆಪಿಯಿಂದ 300 ಸಂಸದರು ಆಯ್ಕೆಯಾಗುತ್ತಾರೆ. ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಜನ ಆಶೀರ್ವಾದ ಮಾಡುತ್ತಾರೆ ಎನ್ನುವ ನಂಬಿಕೆ ಇದೆ. ಈ ಬಾರಿ ಗೆದ್ದು ಸವಾಲಾಗಿ ಸ್ವೀಕರಿಸಿ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ಬಿಜೆಪಿ, ಸಂಘ ಪರಿವಾರ ನಮ್ಮ ಸೇನಾನಿಗಳು. ಸೈನಿಕರು ಗಡಿಯಲ್ಲಿ ಯುದ್ಧ ಮಾಡಿದಂತೆ ಫೀಲ್ಡಿನಲ್ಲಿ ಕೆಲಸ ಮಾಡುತ್ತೇನೆ. ಮೋದಿಯನ್ನು ಗೆಲ್ಲಿಸಲು ಹಗಲಿರುಳು ದುಡಿಯುತ್ತೇವೆ ಎಂದರು.

ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ. ಟಿಕೆಟ್‍ಗಾಗಿ ಆಕಾಂಕ್ಷೆ ಪಡುವುದು ತಪ್ಪಲ್ಲ. ಟಿಕೆಟ್ ಸಿಕ್ಕ ನಂತರ ಎಲ್ಲರೂ ಅಭ್ಯರ್ಥಿ ಪರ ದುಡಿಯುತ್ತಾರೆ ಎಂಬ ವಿಶ್ವಾಸವಿದೆ ಎಂದರು.

https://www.youtube.com/watch?v=srybZEOyHLQ

Comments

Leave a Reply

Your email address will not be published. Required fields are marked *