`ಹನಿಗಳು ಏನನ್ನು ಹೇಳಲು ಹೊರಟಿವೆ’ ಈ ವಾರ ಬಿಡುಗಡೆ

ಬೆಂಗಳೂರು: ಹೊನ್ನಾದೇವಿ ಕ್ರೀಯೆಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹನಿಗಳು ಏನನ್ನು ಹೇಳಲು ಹೊರಟಿವೆ ಚಿತ್ರವು ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಹಳ್ಳಿ ಹುಡುಗನೊಬ್ಬ ವಿದ್ಯಾಭ್ಯಾಸಕ್ಕಾಗಿ ಪಟ್ಟಣಕ್ಕೆ ಬರುತ್ತಾನೆ. ಹಾಗೆ ಕಾಲೇಜು ಸೇರಿದ ಹುಡುಗ ಪ್ರೀತಿಯ ಬಲೆಗೆ ಬಿದ್ದು, ಮನೆಯವರ ವಿರೋಧದ ನಡುವೆಯೂ ಮದುವೆಯಾಗುತ್ತಾನೆ. ಆ ನಂತರ ಆತನ ಬದುಕಿನಲ್ಲಿ ಏನೆಲ್ಲಾ ತಿರುವುಗಳು ಎದುರಾಗುತ್ತವೆ ಅನ್ನೋದು ಈ ಚಿತ್ರದ ಸಾರಾಂಶ.

ಈ ಚಿತ್ರಕ್ಕೆ ನಾಗರಾಜ್.ಬಿ.ಹೆಚ್. ಕಥೆ, ಚಿತ್ರಕಥೆ, ಸಂಭಾಷಣೆ ಬರೆದು, ನಿರ್ಮಾಣದ ಜೊತೆ ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ದಿನೇಶ್ ಕುಮಾರ್ ಸಂಗೀತ, ಅರುಣ್ ಗೂಳೂರು ಛಾಯಾಗ್ರಹಣ, ಅಜಯ್, ನಾಗೇಶ್ ಸಾಹಿತ್ಯ, ಅವಿನಾಶ್ ಶರತ್ ಬೈಂದೂರು, ಚಿರು ಸಂಕಲನವಿದೆ, ನಾಗೇಶ್, ಪಲ್ಲವಿ, ಚಂದ್ರ, ಅರುಣ್ ಶಿವಲಿಂಗೇಗೌಡ ಪಾಂಡವಪುರ, ಮಧು, ಬಸವರಾಜ್, ಜೀವನ್, ಅಭಿಷೇಕ್ ಮುಂತಾದವರ ತಾರಾಬಳಗವಿದೆ.

Comments

Leave a Reply

Your email address will not be published. Required fields are marked *