ಮತ್ತೆ ದರ್ಶನ್, ಯಶ್ ವಿರುದ್ಧ ಸಿಎಂ ಕುಮಾರಸ್ವಾಮಿ ಕಿಡಿ

ರಾಮನಗರ: ಸಿಎಂ ಎಚ್.ಡಿ ಕುಮಾರಸ್ವಾಮಿ ಮತ್ತೊಮ್ಮೆ ನಟರಾದ ದರ್ಶನ್ ಹಾಗೂ ಯಶ್ ವಿರುದ್ಧ ಸಿಡಿದೆದ್ದಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಸಿಎಂ, “ಜನರು ದುಡಿಯುವ ಎತ್ತುಗಳನ್ನು ಉಳಿಸಬೇಕು. ಮೇವು ಹಾಕುವುದು ನಿಮ್ಮ ಕರ್ತವ್ಯ. ಈಗ ಹಲವಾರು ಎತ್ತುಗಳು ಬರುತ್ತೆ ಎಂದು ಹೇಳುತ್ತಾರೆ. ಆದರೆ ಆ ಎತ್ತುಗಳಿಗೆ ಹೊಲ ಉಳುವುದಕ್ಕೆ ಬರುವುದಿಲ್ಲ. ಕಳ್ಳ ಎತ್ತುಗಳು. ನೀವು ಹಾಕಿರುವ ಬೆಳೆಯನ್ನು ತಿಂದುಕೊಂಡು ಹೋಗಲು ಬರುತ್ತಿವೆ. ದುಡಿಯುವ ಎತ್ತುಗಳು ಯಾವುದು ಕಳ್ಳ ಎತ್ತುಗಳ ಯಾವುದು ಎನ್ನುವುದು ನೀವೇ ಯೋಚನೆ ಮಾಡಿ. ಈಗ ನಿಮ್ಮ ಅಭಿವೃದ್ಧಿಗೆ ನಾವು ಒಂದಾಗಿದ್ದೇವೆ. ಇಲ್ಲಿ ಯಾವುದೇ ರಾಜಕೀಯ ಇಲ್ಲ” ಎಂದು ಜೋಡೆತ್ತುಗಳ ವಿರುದ್ಧ ಅಬ್ಬರಿಸಿದ್ದಾರೆ.

ಬಳಿಕ ಮಾತನಾಡಿದ ಬೆಂಗಳೂರು ಅಭಿವೃದ್ಧಿಗೆ 1 ಲಕ್ಷ ಕೋಟಿ ರೂಪಾಯಿ ಅನುದಾನ ಕೊಟ್ಟಿದ್ದೇವೆ. ಆದರೆ ಬೆಂಗಳೂರು ಜನರು ಇನ್ನೂ ಮೋದಿಗೆ ಬಗ್ಗೆ ಅಭಿಮಾನ ಇಟ್ಟುಕೊಂಡಿದ್ದಾರೆ. ಬೆಂಗಳೂರಿಗಾಗಿ ಎಷ್ಟೇ ಅಭಿವೃದ್ಧಿ ಮಾಡಿದ್ರು ಎಲ್ಲೋ ಒಂದು ಕಡೆ ಮೋದಿ ಬಗ್ಗೆ ಅವರಲ್ಲಿ ಒಲವಿದೆ ಎಂದು ಹೇಳಿದ್ದಾರೆ.

“ಒಹೋ ಇವು ಜೋಡೆತ್ತುಗಳಂತೆ, ಇವು ಉಳುವ ಎತ್ತುಗಳಲ್ಲ. ರೈತರು ಬೆಳೆದ ಪೈರನ್ನು ಅರ್ಧ ರಾತ್ರಿ ಹೋಗಿ ತಿನ್ನುವ ಎತ್ತುಗಳು. ಜಿಲ್ಲೆಯಲ್ಲಿ ಹಲವು ದುರಂತಗಳು ನಡೆದಾಗ ಎಲ್ಲಿದ್ದರು? ಅಮ್ಮನ ಮೇಲಿನ ಪ್ರೀತಿಯಿಂದ ಅವರನ್ನು ಉಳಿಸಲು ಬಂದಿದ್ದಾರಲ್ಲ. ಅಂದು ನಡೆದ ದುರಂತದಲ್ಲಿ ನೀರಲ್ಲಿ ಬಿದ್ದಿದ್ದ ಶವಗಳನ್ನು ತೆಗೆಯಲು ಅವರು ಬಂದಿದ್ದರಾ” ಎಂದು ಪ್ರಶ್ನಿಸಿ ಮೊನ್ನೆ ಸಿಎಂ ದರ್ಶನ್ ಮತ್ತು ಯಶ್ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.

Comments

Leave a Reply

Your email address will not be published. Required fields are marked *