ಯಾವನ್ ಬರ್ತಾನೋ ಬರ್ಲಿ, ನನ್ಮಕ್ಳು ಜೆಡಿಎಸ್‍ನವರನ್ನ ಹೆದರಿಸ್ಬೇಕು: ಮಾಜಿ ಶಾಸಕ

ತುಮಕೂರು: ಯಾವನ್ ಬರ್ತಾನೋ ಬರ್ಲಿ, ನನ್ಮಕ್ಳು ಜೆಡಿಎಸ್‍ನವರನ್ನ ಹೆದರಿಸ್ಬೇಕು ಎಂದು ಮಾಜಿ ಶಾಸಕ ಸುರೇಶ್ ಗೌಡ ಜೆಡಿಎಸ್ ವಿರುದ್ಧ ಗುಡುಗಿದ್ದಾರೆ.

ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಸುರೇಶ್ ಗೌಡ ನಾಲಗೆ ಹರಿಬಿಟ್ಟಿದ್ದಾರೆ. ಒಂದೊಂದು ವೋಟು ಕೂಡ ಮುಖ್ಯ. ಯಾವುದಕ್ಕೂ ಎದೆಗುಂದದೆ ದೊಣ್ಣೆ ಹಿಡಿದು ನಿಂತುಕೊಳ್ಳಿ. ಯಾವನ್ ಬರ್ತಾನೋ ಬರಲಿ, ನನ್ಮಕ್ಳು ಜೆಡಿಎಸ್‍ನವರನ್ನು ಹೆದರಿಸಬೇಕು. ಅವರು ಮೋಸ ಮಾಡ್ತಾರೆ. ಅವರು ಕೌರವ ವಂಶಸ್ಥರು. ಅವರ ಮೇಲೆ ಯುದ್ಧ ಮಾಡಬೇಕಾದರೆ ಕೃಷ್ಣನಂತೆ ನಾನು ಇರುತ್ತೀನಿ. ನಿಂತ್ಕೊಂಡು ಯುದ್ಧ ಮಾಡಿ ಅವರನ್ನು ಸಂಹಾರ ಮಾಡೋಣ. ಅವರ ಟೆಕ್ನಿಕ್ಸ್ ನಂಗೆ ಗೊತ್ತಿದೆ ಎಂದು ಹೇಳಿದ್ದಾರೆ.

ಗೌರಿಶಂಕರ್ ವಿರುದ್ಧ ವಾಗ್ದಾಳಿ:
ಗೌರಿಶಂಕರ್ ನಮ್ ದುಡ್ಡೇ ಹೊಡೀತಾನೆ. ನಮ್ ದುಡ್ಡೇ ಹಂಚ್ತಾನೆ. ಅವನೇನು ಕೋಟ್ಯದೀಶ್ವರ ಅಲ್ಲ. ಅಪ್ಪ ಪೊಲೀಸ್ ಆಗಿದ್ದವನು. ಅವನೊಬ್ಬ ದೊಡ್ಡ ಕಳ್ಳ. ಗಣಿ ಧಣಿಯ 150 ಕೇಸಲ್ಲಿ ಲೂಟಿ ಹೊಡೆದಿದ್ದಾನೆ. ಇಂತಹ ಕಳ್ಳರನ್ನು ದೇವೇಗೌಡರು ಕರೆದುಕೊಂಡು ಬಂದು ನಾಟಿ ಮಾಡುತ್ತಾರೆ. ಚೆನ್ನಾಗಿ ಇಸ್ಕೊಳ್ಳಿ. ಚೆನ್ನಾಗಿ ತಿನ್ನಿ. ಎಲ್ಲಾ ಇಸ್ಕೊಂಡು ಬಿಜೆಪಿಗೆ ವೋಟು ಹಾಕಿ. ದುಡ್ಡು ಬಂದರೆ ಚೆನ್ನಾಗ್ ಇಸ್ಕೊಂಡು ತಿನ್ರಲೇ. ಅವನು ಕ್ಯಾನ್ವಸ್ ಗೆ ಬಂದರೆ ಊರಿನ ಒಳಗಡೆ ಬಿಡಬೇಡಿ. ನೀರ್ ಬಿಡಿಸ್ದಲೇ ಇರೋ ಕಳ್ಳ ಕಳ್ಳ ಎಂದು ಕೂಗಿ ಎಂದು ತಮ್ಮದೇ ಶೈಲಿಯಲ್ಲಿ ಕಿಡಿಕಾರಿದ್ದಾರೆ.

ಅಲ್ಲದೆ ಸುರೇಶ್ ಗೌಡ ಅವರು ದೇವೇಗೌಡರು, ಚೆನ್ನಿಗಪ್ಪ, ಶಾಸಕ ಗೌರಿಶಂಕರ್ ವಿರುದ್ಧ ಕೂಡ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

Comments

Leave a Reply

Your email address will not be published. Required fields are marked *