ಕರ್ನಾಟಕದಲ್ಲಿ 7 ಮೋದಿ ರ‍್ಯಾಲಿ – ಏ.8ಕ್ಕೆ ಮೈಸೂರು, ಚಿತ್ರದುರ್ಗದಲ್ಲಿ ಪ್ರಚಾರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು ಮತ್ತು ಚಿತ್ರದುರ್ಗದಲ್ಲಿ ಏಪ್ರಿಲ್ 8 ರಂದು ಬೃಹತ್ ರ‍್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ತಿಳಿಸಿದ್ದಾರೆ.

ಡಾಲರ್ಸ್ ಕಾಲೋನಿಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಮೋದಿ ರ‍್ಯಾಲಿ ನಡೆಯುತ್ತದೆ. ಈ ನಿಟ್ಟಿನಲ್ಲಿ ದಿನಾಂಕ ಕೂಡ ನಿಗದಿಯಾಗಿದ್ದು, ಏಪ್ರಿಲ್ 8 ರಂದು ಬೆಳಗ್ಗೆ ಬೆಳಗ್ಗೆ ಮೈಸೂರು ಹಾಗೂ ಸಂಜೆ ಚಿತ್ರದುರ್ಗದಲ್ಲಿ ನಡೆಯುವ ಬೃಹತ್ ಸಮಾವೇಶಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 7 ರ‍್ಯಾಲಿಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.

ತೇಜಸ್ವಿನಿ ಅನಂತ್‍ಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ತಪ್ಪಲು ಯಾರು ಕಾರಣ ಎನ್ನುವ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ. ಈಗಾಗಲೇ ಕಾರಣ ಯಾರು ಅಂತ ಮಾಧ್ಯಮಗಳಲ್ಲಿ ಬಂದಿದೆ ಎಂದು ಪರೋಕ್ಷವಾಗಿ ಬಿ.ಎಲ್.ಸಂತೋಷ್ ವಿರುದ್ಧ ಆರೋಪಿಸಿದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆಯಲ್ಲಿ ಗೊಂದಲ ಆಗಿದ್ದು ನಿಜ. ಆದರೆ ಇದು ಪಕ್ಷ ತೀರ್ಮಾನವಾಗಿದೆ. ಹೀಗಾಗಿ ಅಭ್ಯರ್ಥಿ ಯಾರೇ ಆಗಲಿ ಮುಖ್ಯವಲ್ಲ, ಪಕ್ಷ ಮುಖ್ಯ. ತೇಜಸ್ವಿ ಸೂರ್ಯ ಅವರ ಪರ ಪ್ರಚಾರಕ್ಕೆ ನಾವು ಕೆಲಸ ಶುರು ಮಾಡಿದ್ದೇವೆ. ರಾಜ್ಯದ 28 ಕ್ಷೇತ್ರಗಳಲ್ಲಿಯೂ ಮೋದಿ ಅವರೇ ಅಭ್ಯರ್ಥಿ ಎಂದು ಬಿಂಬಿಸಲಾಗಿದೆ. ಪಕ್ಷ ದೊಡ್ಡದು, ಪಕ್ಷಕ್ಕೆ ನಿಷ್ಠರಾಗಿರಬೇಕು ಎಂದ ಅವರು, ತೇಜಸ್ವಿನಿ ಅನಂತ್‍ಕುಮಾರ್ ಅವರ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

Comments

Leave a Reply

Your email address will not be published. Required fields are marked *