ಎಚ್‍ಡಿಡಿ ಬಗ್ಗೆ ಗೌರವವಿದೆ, ನಂಬಿಕೆ ಇಲ್ಲ: ವಿ.ಶ್ರೀನಿವಾಸ್ ಪ್ರಸಾದ್

– ಐಟಿ ರೇಡ್ ಮತದಾರರ ಮೇಲೆ ಪರಿಣಾಮ ಬಿರಲ್ಲ

ಮೈಸೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಬಗ್ಗೆ ತುಂಬಾ ಗೌರವವಿದೆ. ಆದರೆ ನಂಬಿಕೆ ಇಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳ ದಾಳಿ ವಿಚಾರವಾಗಿ ದೇವೇಗೌಡರು ನೀಡಿದ್ದ ಹೇಳಿಕೆಗೆ ತಿರುಗೇಟು ನೀಡಿದರು. ರಾಜಕೀಯವಾಗಿ ಅವರು ನಂಬಿಕೆ ಉಳಿಸಿಕೊಂಡಿಲ್ಲ. ಮಾಜಿ ಪ್ರಧಾನಿಯಾಗಿರುವ ಎಚ್.ಡಿ.ದೇವೇಗೌಡ ಅವರು ರಾಷ್ಟದ ಹಿರಿಯ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಆದರೆ ತಮ್ಮ ಸ್ಥಾನಕ್ಕೆ ತಕ್ಕಂತೆ ನಂಬಿಕೆ ಬರುವ ಹಾಗೆ ಜನರಲ್ಲಿ ಭಾವನೆ ಉಳಿಸಿಕೊಂಡಿಲ್ಲ ಎಂದರು.

ಐಟಿ ಇಲಾಖೆಯ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ಕೇಂದ್ರ ಸಂಸ್ಥೆಯಾಗಿರುವ ಐಟಿ ಇಲಾಖೆ ತನ್ನದೇ ಆದ ಜವಬ್ದಾರಿ ಹೊಂದಿದೆ. ಐಟಿ ಅಧಿಕಾರಿಗಳು ಮಾಹಿತಿ ಆಧರಿಸಿ ದಾಳಿ ಮಾಡುತ್ತಾರೆ. ಅದನ್ನು ಪ್ರಶ್ನಿಸಿ ಕಚೇರಿ ಮುಂದೆ ಪ್ರತಿಭಟನೆ ಮಾಡುವುದು ಸರಿಯಲ್ಲ. ಅದರಲ್ಲೂ ಮುಖ್ಯಮಂತ್ರಿ ಸ್ಥಾನದಲ್ಲಿರುವ ಎಚ್.ಡಿ.ಕುಮಾರಸ್ವಾಮಿ ಪ್ರತಿಭಟನೆ ಮಾಡಿದ್ದು ಅಕ್ಷಮ್ಯ ಎಂದರು.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷದ ನಾಯಕರು ಐಟಿ ದಾಳಿ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಬಹುದಿತ್ತು. ಅದನ್ನು ಬಿಟ್ಟು ಇಲಾಖೆಯ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ್ದು ಸೂಕ್ತವಲ್ಲ. ಐಟಿ ರೇಡ್ ಮತದಾರರ ಮೇಲೆ ಪರಿಣಾಮ ಬಿರುವುದಿಲ್ಲ ಎಂದು ವಿ.ಶ್ರೀನಿವಾಸ್ ಪ್ರಸಾದ್ ಹೇಳಿದರು.

Comments

Leave a Reply

Your email address will not be published. Required fields are marked *