ಕೊನೆಗೂ ಧಾರವಾಡದಲ್ಲಿ ವಿನಯ್ ಕುಲಕರ್ಣಿಗೆ ಕಾಂಗ್ರೆಸ್ ಮಣೆ

ಧಾರವಾಡ: ಕಾಂಗ್ರೆಸ್ ನಲ್ಲಿ ತೀವ್ರಗೊಂದಲಕ್ಕೆ ಕಾರಣವಾಗಿದ್ದ ಧಾರವಾಡ ಲೋಕಸಭಾ ಕ್ಷೇತ್ರದ ಟಿಕೆಟ್ ಕೊನೆಗೂ ಬಗೆಹರಿದಿದೆ.

ಪಕ್ಷದ ನಾಯಕ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕಾಂಗ್ರೆಸ್ ಮಣೆ ಹಾಕಿದ್ದು, ತಡರಾತ್ರಿ ಟಿಕೆಟ್ ಪಟ್ಟಿ ಪ್ರಕಟಿಸಿದೆ. ಕ್ಷೇತ್ರದ ಟಿಕೆಟ್‍ಗಾಗಿ ಶಾಕಿರ್ ಸನದಿ ಹಾಗೂ ವಿಜಯ್ ಕುಲಕರ್ಣಿ ನಡುವೆ ತೀವ್ರ ಪೈಪೋಟಿ ಇತ್ತು. ಆದ್ರೆ ಹೈಕಮಾಂಡ್ ಕುಲಕರ್ಣಿಗೆ ಟಿಕೆಟ್ ನೀಡಿದೆ.

ದಾವಣಗೆರೆ ಕ್ಷೇತ್ರದಲ್ಲಿ ಎಚ್.ಬಿ.ಮಂಜಪ್ಪಗೆ ಟಿಕೆಟ್ ನೀಡಲಾಗಿದ್ದು, ಶ್ಯಾಮನೂರು ತಮ್ಮ ಬೆಂಬಲಿಗನಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಜಪ್ಪ ಕುರುಬ ಸಮುದಾಯಕ್ಕೆ ಸೇರಿದ ನಾಯಕರಾಗಿದ್ದಾರೆ.

Comments

Leave a Reply

Your email address will not be published. Required fields are marked *