ಬಾಡಿಗೆ ಕೊಡದೇ ಇದ್ದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡ್ತಾರೆ: ಯಶ್‍ಗೆ ನಿಖಿಲ್ ಟಾಂಗ್

ಮಂಡ್ಯ: ಬಾಡಿಗೆ ಮನೆಯಲ್ಲಿದ್ದಾಗ ಬಾಡಿಗೆ ಕೊಡದೆ ಇದ್ದವರು ಇವತ್ತು ಇಷ್ಟೆಲ್ಲಾ ಮಾತನಾಡ್ತಾರೆ. ನನ್ನ ಯೋಗ್ಯತೆ ಬಗ್ಗೆ ಮಾತನಾಡ್ತಾರೆ ಎಂದು ರಾಕಿಂಗ್ ಸ್ಟಾರ್ ಯಶ್‍ಗೆ ನಿಖಿಲ್ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

ನಾಗಮಂಗಲದ ಬೈರಸಂದ್ರದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಯಶ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಬಿಜೆಪಿ ಬೆಂಬಲಿತ ಅಭ್ಯರ್ಥಿಯ ಹಿರಿಮಗನೋ ಕಿರಿ ಮಗನೋ ಗೊತ್ತಿಲ್ಲ. ಬಾಡಿಗೆ ಮನೆಯವರಿಗೆ ಬಾಡಿಗೆ ಕೊಡದೇ ಇದ್ದವರು ಇವತ್ತು ನನ್ನ ಯೋಗ್ಯತೆ ಬಗ್ಗೆ ಮಾತನಾಡ್ತಾರೆ ಎಂದು ಬಹಿರಂಗವಾಗಿ ಯಶ್‍ಗೆ ಟಾಂಗ್ ಕೊಟ್ಟರು.

ಪಾಪ ಎಸಿಯಲ್ಲಿ ಕುಳಿತುಕೊಂಡು ಛತ್ರಿ ಹಿಡ್ಕೊಂಡು ಓಡಾಡುವವರಿಗೆ ಬಿಸಿಲಿನಲ್ಲಿ ಓಡಾಡೋದು ಕಷ್ಟ ಆಗ್ತಿರಬಹುದೆಂದು ಕುಮಾರಣ್ಣ ಹೇಳಿದ್ದರು. ಅದಕ್ಕೆ ಯಶ್, ದರ್ಶನ್ ಹಾಗೂ ಸುಮಲತಾ ಅವರು ಪ್ರತಿಕ್ರಿಯೆ ನೀಡಿದ್ದರು. ಈ ಬಗ್ಗೆ ಒಂದು ಮಾತು ಹೇಳೋಕೆ ಇಷ್ಟಪಡುತ್ತೀನಿ, ದೊಡ್ಡ ಮನುಷ್ಯ ಮಹಾನುಭಾವ ನಮ್ಮ ತಾತ ದೇವೇಗೌಡರು ಪ್ರಧಾನಿಯಾದಾಗ ನಾವು ಕತ್ರಿಗುಪ್ಪೆಯಲ್ಲಿ ಬಾಡಿಗೆ ಮನೆಯಲ್ಲಿದ್ದವರು. ಆಗ ನಮ್ಮ ತಾಯಿ 5 ಸಾವಿರ ರೂಪಾಯಿನಲ್ಲಿ ಮನೆ ನಿಭಾಯಿಸುತ್ತಿದ್ದರು. ಆದರೆ ಇವತ್ತು ಬಾಡಿಗೆ ಕೊಡದೇ ಇದ್ದವರು ಇಷ್ಟೆಲ್ಲಾ ಮಾತನಾಡುತ್ತಾರೆ. ನೀವು ನಮ್ಮ ತಂದೆ ತಾಯಾಂದಿರು. ನನ್ನ ತಂದೆ ಹಾಗೂ ತಾತನಿಗೆ ಹೃದಯದಲ್ಲಿ ಸ್ಥಾನ ಕೊಟ್ಟಿದ್ದೀರ. ಹಾಗೆಯೇ ನನಗೂ ಕೊಡುತ್ತೀರ ಅಂತ ಬಂದಿದ್ದೀನಿ ಎಂದು ಪ್ರಚಾರ ಮುಂದುವರಿಸಿದರು.

Comments

Leave a Reply

Your email address will not be published. Required fields are marked *