ಕೈ ಅತೃಪ್ತ ನಾಯಕರ ವಿರುದ್ಧ ಸಿಎಂ ಕೆಂಡಾಮಂಡಲ

ಮಂಡ್ಯ: ನಿಖಿಲ್ ಕುಮಾರಸ್ವಾಮಿಯನ್ನು ಸೋಲಿಸಿ, ಸರ್ಕಾರ ಬೀಳಿಸಲು ಹೊರಟಿದ್ದಾರೆ ಸಿಎಂ ಕುಮಾರಸ್ವಾಮಿ ಕೈ ಅತೃಪ್ತ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ.

ಪುತ್ರನ ಪರ ಪ್ರಚಾರದ ವೇಳೆ ಮಾತನಾಡಿದ ಅವರು, ಇಲ್ಲಿ ನಮ್ಮನ್ನು ಸೋಲಿಸಿ, ರಾಜ್ಯದಲ್ಲಿರುವ ಮೈತ್ರಿ ಸರ್ಕಾರವನ್ನು ಬೀಳಿಸಲು ಹೊರಟಿದ್ದಾರೆ. ಸುಮಲತಾ ಅಂಬರೀಶ್ ಅವರ ಜೊತೆಗೆ ಸೇರಿಕೊಂಡು ನನ್ನನ್ನು ಮುಗಿಸಲು ಹೊರಟಿದ್ದಾರೆ. ಅವರು ನಮ್ಮ ಜೊತೆಗೆ ಇದ್ದು ನಮ್ಮಲ್ಲೇ ಬೆಳದಂತವರು. ಈಗ ನಮ್ಮ ವಿರುದ್ಧವೇ ತಿರುಗಿ ಬಿದ್ದಿದ್ದಾರೆ ಎಂದು ಹೆಸರು ಪ್ರಸ್ತಾಪ ಮಾಡದೇ ಸ್ಥಳೀಯ ಕಾಂಗ್ರೆಸ್ಸಿನ ರೆಬೆಲ್ ನಾಯಕರ ವಿರುದ್ಧ ಸಿಎಂ ಕಿಡಿಕಾರಿದರು.

ಕಾಂಗ್ರೆಸ್ ಮುಖಂಡ ರಮೇಶ್ ಬಂಡಿಸಿದ್ದೇಗೌಡ, ಚಲುವರಾಯಸ್ವಾಮಿ, ನರೇಂದ್ರ ಸ್ವಾಮಿ ಈ ಹಿಂದೆ ಕುಮಾರಸ್ವಾಮಿ ಜೊತೆಯಲ್ಲೇ ಕೆಲಸ ಮಾಡಿದ್ದಾರೆ. ಈಗ ಸಿಎಂ ಪುತ್ರ ಚುನಾವಣೆಗೆ ನಿಂತಿದ್ದರೂ ಈ ನಾಯಕರು ಪ್ರಚಾರಕ್ಕೆ ಈವರೆಗೂ ಬಂದಿಲ್ಲ. ಈ ವಿಚಾರವನ್ನು ಮುಂದಿಟ್ಟುಕೊಂಡು ಸಿಎಂ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

Comments

Leave a Reply

Your email address will not be published. Required fields are marked *