ಚುನಾವಣಾ ತರಬೇತಿ ವೇಳೆ ಹೃದಯಾಘಾತದಿಂದ ಶಿಕ್ಷಕ ಸಾವು

ಬಳ್ಳಾರಿ: ಚುನಾವಣಾ ತರಬೇತಿ ವೇಳೆ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬಳ್ಳಾರಿಯ ಸಿರಗುಪ್ಪದಲ್ಲಿ ನಡೆದಿದೆ.

ಸಿರಗುಪ್ಪ ತಾಲೂಕಿನ ಕೆಕ್ಕಲಕೋಟೆ ಗ್ರಾಮದ ಶಿಕ್ಷಕ ಬಿ.ರಮೇಶ್ (46) ಮೃತರು. ಬಿ.ರಮೇಶ್ ಅವರು ಸಿರಗುಪ್ಪದ ಆರನೇ ವಾರ್ಡಿನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದು, ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಪೂಲಿಂಗ್ ಆಫೀಸರ್ ಆಗಿ ನೇಮಕವಾಗಿದ್ದರು.

ಸಿರಗುಪ್ಪದ ವಿವೇಕಾನಂದ ಶಾಲೆಯಲ್ಲಿ ಇಂದು ಚುನಾವಣಾ ತರಬೇತಿ ಆರಂಭವಾಗಿದ್ದು, 480ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಈ ವೇಳೆ ಬಿ.ರಮೇಶ್ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಾರ್ಗ ಮಧ್ಯೆ ಬಿ.ರಮೇಶ್ ಮೃತಪಟ್ಟಿದ್ದಾರೆ ಎಂದು ವೈದ್ಯರು ಖಚಿತ ಪಡಿಸಿದ್ದಾರೆ.

Comments

Leave a Reply

Your email address will not be published. Required fields are marked *