ನೀವು ಯಾವ ಮುಖ ಇಟ್ಟುಕೊಂಡು ಪ್ರಚಾರಕ್ಕೆ ಬಂದಿದ್ದೀರಿ: ಕೈ ಶಾಸಕರಿಗೆ ಗ್ರಾಮಸ್ಥರಿಂದ ಫುಲ್ ಕ್ಲಾಸ್

ಕೊಪ್ಪಳ: ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಸ್ಥಳೀಯರು ಶಾಸಕರಿಗೆ ಫುಲ್ ಕ್ಲಾಸ್ ತೆಗೆದುಕೊಂಡ ಪ್ರಸಂಗ ಜಿಲ್ಲೆಯ ಕುಷ್ಟಗಿ ತಾಲೂಕಿನ ಜಮಲಾಪುರ ಗ್ರಾಮದಲ್ಲಿ ನಡೆದಿದೆ.

ತೊಗರಿ ಖರೀದಿ ಕೇಂದ್ರದಲ್ಲಿ ಖರೀದಿ ವಿಳಂಬ ಮಾಡುತ್ತಿರುವ ವಿಚಾರ ಸಂಬಂಧ ಕಾಂಗ್ರೆಸ್ ಶಾಸಕ ಅಮರೇಗೌಡ ಭಯ್ಯಾಪುರ್ ಅವರಿಗೆ ಜಮಲಾಪುರ ಗ್ರಾಮಸ್ಥರು ತರಾಟೆಗೆ ತಗೆದುಕೊಂಡಿದ್ದಾರೆ. ಕುಷ್ಟಗಿ ಕೃಷಿ ಮಾರುಕಟ್ಟೆ ಕೇಂದ್ರದಲ್ಲಿ ತೊಗರಿ ಖರೀದಿ ಕೇಂದ್ರ ತೆರೆದರೂ ರೈತರು ಬೆಳೆದ ತೊಗರಿ ಖರೀದಿ ಮಾಡುತ್ತಿಲ್ಲ. ನೀವು ಯಾವ ಮುಖ ಇಟ್ಟುಕೊಂಡು ಪ್ರಚಾರಕ್ಕೆ ಬಂದಿದ್ದೀರಿ? ಗ್ರಾಮದ ರಸ್ತೆಗಳು ಹದಗೆಟ್ಟು ಹೋಗಿವೆ. ಸಂಚಾರಕ್ಕೆ ತೊಂದರೆಯಾಗುತ್ತಿದೆ. ನೀವು ಯಾವುದೇ ಅಭಿವೃದ್ಧಿ ಕೈಗೊಂಡಿಲ್ಲ ಎಂದು ಶಾಸಕರ ವಿರುದ್ಧ ಅಸಮಾಧಾನ ಹೊರ ಹಾಕಿದರು.

ಗ್ರಾಮಸ್ಥರು ತರಾಟೆ ತೆಗೆದುಕೊಳ್ಳುತ್ತಿದ್ದಂತೆ ಶಾಸಕ ಅಮರೇಗೌಡ ಭಯ್ಯಾಪುರ್ ಅವರ ಪ್ರಚಾರಕ್ಕೆ ಅಡ್ಡಿ ಉಂಟಾಯಿತು. ಇದರಿಂದಾಗಿ ಗ್ರಾಮಸ್ಥರನ್ನು ಸಮಾಧಾನಪಡಿಸಿ, ಮುಂದಿನ ಗ್ರಾಮದಲ್ಲಿ ಪ್ರಚಾರಕ್ಕೆ ತೆರಳಿದರು.

Comments

Leave a Reply

Your email address will not be published. Required fields are marked *