ನಾವು ನಿಮ್ಮನ್ನ ಗೆಲ್ಲಿಸಿದ್ಯಾಕೆ? – ಸಚಿವ ಡಿಸಿ ತಮ್ಮಣ್ಣಗೆ ಗ್ರಾಮಸ್ಥರಿಂದ ತರಾಟೆ

ಮಂಡ್ಯ: ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬೀಳಲಿದೆ. ಹೀಗಾಗಿ ಅಭ್ಯರ್ಥಿಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಹೀಗೆ ಪ್ರಚಾರ ನಡೆಸುತ್ತಿದ್ದ ವೇಳೆ ಸಚಿವ ಡಿಸಿ ತಮ್ಮಣ್ಣ ಅವರನ್ನು ಗ್ರಾಮಸ್ಥರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಮಂಡ್ಯದ ಮದ್ದೂರಿನ ಬಿದರಹೊಸಹಳ್ಳಿ ಗ್ರಾಮದಲ್ಲಿ ಸೋಮವಾರ ಸಚಿವರು ಮೈತ್ರಿ ಅಭ್ಯರ್ಥಿ ನಿಖಿಲ್ ಪರ ಮತ ಕೇಳಲು ಗ್ರಾಮಕ್ಕೆ ಭೇಟಿ ಕೊಟ್ಟಿದ್ದರು. ಈ ವೇಳೆ ಗ್ರಾಮಸ್ಥರು ಗ್ರಾಮದ ಸಮಸ್ಯೆ, ಮೈಷುಗರ್‍ಗೆ ಕಬ್ಬು ಪೂರೈಕೆ ಮಾಡಲು ಹಣ ಸಂದಾಯದ ವಿಚಾರವಾಗಿ ಸಚಿವರನ್ನು ಪ್ರಶ್ನಿಸಿದ್ದಾರೆ.

ಕಬ್ಬಿನ ದುಡ್ಡು ಬಂದಿಲ್ಲ, ಊರು ಸಮಸ್ಯೆ ಬಗೆಹರಿದಿಲ್ಲ, ನಾವು ನಿಮ್ಮನ್ನ ಗೆಲ್ಲಿಸಿದ್ಯಾಕೆ? ಎಂದು ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸಚಿವರು ಸಮಜಾಯಿಷಿ ನೀಡಲು ಮುಂದಾದ್ರು. ಆದ್ರೆ ಯುವಕನೊಬ್ಬ ಸಿಟ್ಟಿನಿಂದ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಬಳಿಕ ಗ್ರಾಮಸ್ಥರು ಯುವಕನನ್ನು ಸಮಾಧಾನಪಡಿಸಿದ ಘಟನೆಯೂ ನಡೆದಿದೆ.

Comments

Leave a Reply

Your email address will not be published. Required fields are marked *