ಜೆಡಿಎಸ್ ಕುಟುಂಬ ರಾಜಕಾರಣದ ಸಿಂಬಲ್ ಕಣ್ಣೀರು: ಜಗದೀಶ್ ಶೆಟ್ಟರ್ ಲೇವಡಿ

ಹುಬ್ಬಳ್ಳಿ: ಜೆಡಿಎಸ್ ಕುಟುಂಬ ರಾಜಕಾರಣದ ಸಂಕೇತವೇ ಕಣ್ಣೀರಾಗಿದೆ. ಸಿಎಂ ಕುಮಾರಸ್ವಾಮಿ ಅವರು ಸೋಲುವ ಭೀತಿಯಿಂದ ಕಣ್ಣೀರು ಹಾಕುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಜಗದೀಶ್ ಶೆಟ್ಟರ್, ದೇವೇಗೌಡರು ಮತ್ತು ಜೆಡಿಎಸ್ ಕುಟುಂಬ ರಾಜಕಾರಣದ ಸಿಂಬಲ್ ಕಣ್ಣೀರಾಗಿದೆ.  ಸಿಎಂ ಕುಮಾರಸ್ವಾಮಿ ಅವರು ಹತಾಶರಾಗಿದ್ದು, ಯಾವುದೇ ಕಾರಣಕ್ಕೂ ನಾನು ಕಣ್ಣೀರು ಹಾಕುವುದಿಲ್ಲ ಎಂದು ಹೇಳಿದ್ದರು. ಆದರೆ ಮತ್ತೆ ಸೋಮವಾರ ಹತಾಶರಾಗಿ ಕಣ್ಣೀರು ಹಾಕಿದ್ದಾರೆ. ಈ ಮೂಲಕ ಕುಮಾರಸ್ವಾಮಿ ಅಳುಮಂಜಿ ಅನ್ನೋದು ಮತ್ತೆ ಸಾಬೀತಾಗಿದೆ ಎಂದು ವ್ಯಂಗ್ಯವಾಡಿದರು.

ಕಣ್ಣಿರು ಸುರಿಸಿ ಅಧಿಕಾರ ಹಿಡಿಯಬೇಕು ಅಂತ ಜೆಡಿಎಸ್ ಹೊರಟಿದೆ. ಆದರೆ ಅದು ಸಾಧ್ಯವಾಗುವುದಿಲ್ಲ. ರಾಜ್ಯದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲಿ ಬಿಜೆಪಿ ಅಲೆಯಿದೆ. ಬಿಜೆಪಿ ಶಿಸ್ತು ಬದ್ಧವಾಗಿ ಪ್ರಚಾರ ಮಾಡುತ್ತಿದೆ. ನರೇಂದ್ರ ಮೋದಿ, ಅಮಿತ್ ಷಾ ಅವರು ದೊಡ್ಡ ಮಟ್ಟದಲ್ಲಿ ರ‍್ಯಾಲಿಗಳಿಂದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದ್ದಾರೆ. ಕಾಂಗ್ರೆಸ್-ಜೆಡಿಎಸ್ ನಾಯಕರ ಮಧ್ಯೆ ಮುಸುಕಿನ ಗುದ್ದಾಟ ಮುಂದುವರಿದಿದೆ. ಇದರಿಂದ ಮೈತ್ರಿ ಸರ್ಕಾರದಲ್ಲಿ ಅಸಮಾಧಾನದಿಂದ ಕಾಂಗ್ರೆಸ್ ಜೆಡಿಎಸ್ ಮುಳುವಾಗಲಿದೆ ಎಂದು ಶೆಟ್ಟರ್ ಹೇಳಿದರು.

Comments

Leave a Reply

Your email address will not be published. Required fields are marked *