ಸೇತುವೆಗೆ ಡಿಕ್ಕಿ ಹೊಡೆದು ಪೆಟ್ರೋಲ್ ಟ್ಯಾಂಕರ್ ಪಲ್ಟಿ – ಚಾಲಕ ಸಾವು

ಚಿಕ್ಕಮಗಳೂರು: ಸೇತುವೆಗೆ ಡಿಕ್ಕಿ ಹೊಡೆದು ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನ ದೋಗೆಹಳ್ಳಿ ಗ್ರಾಮದ ಬಳಿ ನಡೆದಿದೆ.

ಮೃತ ಚಾಲಕನನ್ನ ಹಾಸನ ಮೂಲದ ಲಿಂಗರಾಜು(50) ಎಂದು ಗುರುತಿಸಲಾಗಿದೆ. ಲಾರಿ ಪಕ್ಕದಲ್ಲೇ ಟ್ರಾನ್ಸ್ ಫಾರ್ಮರ್ ಇದ್ದು, ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದೆ.

ಟ್ಯಾಂಕರ್ ಅನ್‍ಲೋಡ್ ಮಾಡಿಕೊಂಡು ದಾವಣಗೆರೆಯಿಂದ ಬೀರೂರಿಗೆ ಹಿಂದಿರುಗುತ್ತಿತ್ತು. ಇದೇ ವೇಳೆ ಬೀರೂರಿನ ದೋಗೆಹಳ್ಳಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಚಾಲಕ ಲಾರಿಯಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಈ ಮಾರ್ಗದಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸುತ್ತಿವೆ. ಹೀಗಾಗಿ ಜನ ಜೀವವನ್ನ ಕೈಯಲ್ಲಿಡಿದು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ದಾವಣಗೆರೆ-ಬೀರೂರಿನ ರಾಜ್ಯ ಹೆದ್ದಾರಿಯಲ್ಲಿ ಲೋಕೋಪಯೋಗಿ ಇಲಾಖೆ ಯಾವುದೇ ಹಂಪ್ ಹಾಕದಿರುವುದರಿಂದ ಈ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Comments

Leave a Reply

Your email address will not be published. Required fields are marked *