ಭದ್ರಾ ಹಿನ್ನೀರಿನಲ್ಲಿ ಮುಳುಗಿ ಯುವಕರಿಬ್ಬರು ಸಾವು

ಚಿಕ್ಕಮಗಳೂರು: ಭದ್ರಾ ಹಿನ್ನೀರಿನಲ್ಲಿ ದಾಟುವಾಗ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮೂರು ಕಣ್ಣಿನ ಸೇತುವೆ ಬಳಿ ನಡೆದಿದೆ.

ಸಂತೋಷ್(19) ಮತ್ತು ದಮ್ಮೂರ್(24) ಮೃತ ದುರ್ದೈವಿಗಳು. ಈ ಘಟನೆ ಶನಿವಾರ ಸಂಜೆ ನಡೆದಿದ್ದು, ಇಂದು ಮೃತದೇಹಗಳು ಸಿಕ್ಕಿವೆ. ಸಂತೋಷ್ ನೇಪಾಳದಿಂದ ಬಂದು ಎನ್‍.ಆರ್.ಪುರದಲ್ಲಿ ಸೆಂಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದನು.

ನೇಪಾಳದಿಂದ ಸಂತೋಷ್ ಮನೆಗೆ ಸಂಬಂಧಿ ದಮ್ಮೂರ್ ಬಂದಿದ್ದನು. ಆತನನ್ನು ಕರೆದುಕೊಂಡು ಹೋಗುತ್ತಿದ್ದಾಗ ಭದ್ರಾ ಹಿನ್ನೀರಿನಲ್ಲಿ ದಾಟುವಾಗ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದು ಶನಿವಾರ ಸಂಜೆಯಿಂದ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ ಕತ್ತಲಾಗಿದ್ದರಿಂದ ಶೋಧಕಾರ್ಯ ನಡೆಸಲು ಸಾಧ್ಯವಾಗಿಲ್ಲ. ಇಂದು ಬೆಳಗ್ಗೆಯಿಂದ ಮತ್ತೆ ಶೋಧಕಾರ್ಯ ಮಾಡಿದಾಗ ಇಬ್ಬರ ಮೃತದೇಹ ಪತ್ತೆಯಾಗಿವೆ.

ಈ ಕುರಿತು ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *