ಖಾತೆಗೆ 15 ಲಕ್ಷ ರೂ. ಬಂತೇ – ದಿಗ್ವಿಜಯ್ ಪ್ರಶ್ನೆಗೆ ವೇದಿಕೆಯಲ್ಲೇ ಉತ್ತರ ಕೊಟ್ಟ ಯುವಕನಿಗೆ ಸನ್ಮಾನ

ನವದೆಹಲಿ: ಕೆಲ ದಿನಗಳ ಹಿಂದೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಭೋಪಾಲ್ ಕ್ಷೇತ್ರದ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ಪ್ರಶ್ನೆಗೆ ವೇದಿಕೆ ಮೇಲೆ ಉತ್ತರಿಸಿದ್ದ ಯುವಕನಿಗೆ ಬಿಜೆಪಿ ಸನ್ಮಾನ ಮಾಡಿ ಗೌರವ ಸೂಚಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು 2014ರ ಚುನಾವಣೆಗೂ ಮುನ್ನ 15 ಲಕ್ಷ ಬ್ಯಾಂಕ್ ಖಾತೆಗೆ ಹಾಕುವುದಾಗಿ ಹೇಳಿದ್ದರು. ನಿಮ್ಮ ಖಾತೆಗೆ ಹಣ ಬಂದಿದ್ದೇಯಾ ಎಂದು ದಿಗ್ವಿಜಯ್ ಸಿಂಗ್ ಪ್ರಚಾರ ಸಮಾರಂಭದಲ್ಲಿ ಪ್ರಶ್ನಿಸಿದ್ದರು. ಈ ವೇಳೆ ವೇದಿಕೆ ಬಂದಿದ್ದ ಅಮಿತ್ ಮಲಿ, ಮೋದಿ ಸರ್ಜಿಕಲ್ ಸ್ಟ್ರೈಕ್, ಏರ್ ಸ್ಟ್ರೈಕ್ ನಡೆಸುವ ಮೂಲಕ 15 ಲಕ್ಷ ರೂ. ನನಗೆ ನೀಡಿದ್ದಾರೆ ಎಂದು ಹೇಳಿ ದಿಗ್ವಿಜಯ್ ಸಿಂಗ್‍ಗೆ ಮುಜುಗರ ಉಂಟು ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಒಂದೇ ದಿನದಲ್ಲಿ ಯುವಕ ಸ್ಟಾರ್ ಆಗಿದ್ದ.

ಕಾಂಗ್ರೆಸ್ ಸಮಾವೇಶದ ಬಳಿಕ ಅಲ್ಲಿದ್ದ ಯಾರು ನನ್ನೊಂದಿಗೆ ಕೆಟ್ಟದಾಗಿ ನಡೆದುಕೊಂಡಿಲ್ಲ ಎಂದು ಅಮಿತ್ ಮಲಿ ಸ್ಪಷ್ಟಪಡಿಸಿದ್ದಾನೆ. ಇತ್ತ ಯುವಕ ನಡೆಗೆ ಮೆಚ್ಚುಗೆ ಸೂಚಿಸಿರುವ ಭೋಪಾಲ್ ಬಿಜೆಪಿ ಘಟಕ ಸನ್ಮಾನ ಮಾಡಿ ಗೌರವಿಸಿದೆ.

ಲೋಕಸಭಾ ಚುನಾವಣೆಯ 6ನೇ ಹಂತದ ಭಾಗವಾಗಿ ಮೇ 12 ರಂದು ಭೋಪಾಲ್ ನಲ್ಲಿ ಮತದಾನ ನಡೆಯಲಿದೆ. ಇತ್ತ ಬಿಜೆಪಿಯಿಂದ ಸಾಧ್ವಿ ಪ್ರಜ್ಞಾ ಸಿಂಗ್ ಭೋಪಾಲ್ ನಿಂದ ಸ್ಪರ್ಧೆ ಮಾಡುತ್ತಿದ್ದು, ತೀವ್ರ ಕುತೂಹಲ ಮೂಡಿಸಿದೆ.

Comments

Leave a Reply

Your email address will not be published. Required fields are marked *