ಟೈರ್ ಬ್ಲಾಸ್ಟ್ ಆಗಿ ಡಿವೈಡರ್ ದಾಟಿ ಲಾರಿಗೆ ಡಿಕ್ಕಿ ಹೊಡೆದ ಕಾರ್-ಒಂದೇ ಕುಟುಂಬದ ಐವರ ಸಾವು

ಚಿತ್ರದುರ್ಗ: ಟೈರ್ ಬ್ಲಾಸ್ಟ್ ಆಗಿ ಡಿವೈಡರ್ ದಾಟಿ ಕಾರು ಲಾರಿಗೆ ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಬಳಿ ನಡೆದಿದೆ.

ತಾಯಮ್ಮ (59), ಸುಶ್ಮಿತಾ (12), ಲತಾ(26), ವೀಣಿಕಾ(3), ಜಾನವಿ(3) ಮೃತ ದುರ್ದೈವಿಗಳು. ಒಂದೇ ಕುಟುಂಬದ ಐವರು ಭದ್ರಾವತಿಯ ನಗರದಲ್ಲಿರುವ ಬಂಡೆಮ್ಮ ದೇವರ ಜಾತ್ರೆ ಮುಗಿಸಿ ಬೆಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಬೆಂಗಳೂರು ಕಡೆಗೆ ಹೋಗುತ್ತಿದ್ದ ಇನೋವಾ ಕಾರಿನ ಟೈರ್ ಸ್ಫೋಟಗೊಂಡು ಡಿವೈಡರ್ ದಾಟಿದೆ. ಈ ವೇಳೆ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಐವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಹಿರಿಯೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Comments

Leave a Reply

Your email address will not be published. Required fields are marked *