ಪ್ರಧಾನಿ ಮೋದಿ ಹೆದರಿದ್ದಾರೆ: ಅಶೋಕ್ ಗೆಹ್ಲೋಟ್

ಜೈಪುರ್: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್ ಶಾ ಅವರಿಗೆ ರಾಜಸ್ಥಾನದಲ್ಲಿ ಸೋಲಿನ ಭೀತಿ ಉಂಟಾಗಿದೆ. ಹೀಗಾಗಿ ಮೂರು ಬಾರಿ ಕಾರ್ಯಕರ್ತರ ಸಭೆ ಮಾಡಿದ್ದಾರೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಜೈಪುರ್ ನಲ್ಲಿ ಮಾತನಾಡಿ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿಯಾಗಿ ಪ್ರಚಾರ ಮಾಡಿದ್ದೇವೆ. ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ರಾಜಸ್ಥಾನದ ಮೇಲೆ ಗಮನವನ್ನು ಕೇಂದ್ರಿಕರಿಸಿದ್ದರು. ಸೋಲುವ ಭೀತಿಯಿಂದಾಗಿ ಮೇಲಿಂದ ಮೇಲೆ ಪ್ರಚಾರ, ಸಮಾವೇಶಗಳನ್ನು ಕೈಗೊಂಡರು ಎಂದು ವ್ಯಂಗ್ಯವಾಡಿದರು.

ರಾಜಸ್ಥಾನದಲ್ಲಿ ಏಪ್ರಿಲ್ 29ರಂದು ಮೊದಲ ಹಂತದ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿದಿದೆ. ಜೈಪುರ್, ಜೈಪುರ್ ಗ್ರಾಮಾಂತರ, ಗಂಗಾನಗರ್ ಸೇರಿದಂತೆ 12 ಲೋಕಸಭಾ ಕ್ಷೇತ್ರಗಳಿಗೆ ಭಾನುವಾರ ಮತದಾನ ನಡೆಯಲಿದೆ.

ರಾಜಸ್ಥಾನದಲ್ಲಿ ಒಟ್ಟು 25 ಲೋಕಸಭಾ ಕ್ಷೇತ್ರಗಳಿವೆ. 2014ರ ಲೋಕಸಭಾ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಬಿಜೆಪಿ ಜಯಗಳಿಸಿತ್ತು.

Comments

Leave a Reply

Your email address will not be published. Required fields are marked *