ಬೆಂಗಳೂರಿನಲ್ಲಿ ಹೈಟೆನ್ಷನ್ ತಂತಿಗೆ ವ್ಯಕ್ತಿ ಬಲಿ

ಬೆಂಗಳೂರು: ನಗರದಲ್ಲಿ ಹೈಟೆನ್ಷನ್ ತಂತಿಗೆ ವ್ಯಕ್ತಿ ಬಲಿಯಾಗಿರುವ ಘಟನೆ ನಗರದ ಮತ್ತಿಕೆರೆಯ ಮಂಜುನಾಥ ನಗರದಲ್ಲಿ ನಡೆದಿದೆ.

ಸತೀಶ್ (23) ಸಾವನ್ನಪ್ಪಿದ ಕಾರ್ಮಿಕ. ಸತೀಶ್ ಮಂಜುನಾಥ ನಗರದ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದರು. ಮೇ 27ರಂದು ಸತೀಶ್ ಮೊದಲನೇ ಮಹಡಿಯಲ್ಲಿ ಕಾಂಕ್ರೀಟ್ ಹಾಕುತ್ತಿದ್ದರು.

ಈ ವೇಳೆ ಕಟ್ಟಡದಲ್ಲಿ ಹಾದುಹೋಗಿದ್ದ ಹೈಟೆನ್ಷನ್ ವೈರ್ ಗೆ ಕಬ್ಬಿಣದ ಸರಳುಗಳು ತಗುಲಿದೆ. ಪರಿಣಾಮ ಸತೀಶ್‍ಗೆ ವಿದ್ಯುತ್ ಸ್ಪರ್ಶಿಸಿ ಶೇ.80 ಸುಟ್ಟು ಗಾಯಗೊಂಡಿದ್ದರು. ಕೂಡಲೇ ಗಾಯಾಳು ಸತೀಶ್‍ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸತೀಶ್ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ನಿರ್ಲಕ್ಷ್ಯದ ಅಡಿಯಲ್ಲಿ ಕಟ್ಟಡ ಮಾಲೀಕನ ವಿರುದ್ಧ ದೂರು ದಾಖಲಾಗಿದೆ. ಕಟ್ಟಡ ಮಾಲೀಕ ಜಯಕುಮಾರ್ ಹಾಗೂ ಮೇಸ್ತ್ರಿ ರಾಮಚಂದ್ರ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಸವೇಶ್ವರನಗರ ಪೊಲೀಸರು ಮಾಲೀಕ ಹಾಗೂ ಮೇಸ್ತ್ರಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.

ಈ ಮೂಲಕ ನಾಲ್ಕು ತಿಂಗಳಲ್ಲಿ ವಿದ್ಯುತ್ ಅವಘಡಕ್ಕೆ ಸಾವನ್ನಪ್ಪಿದ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

Comments

Leave a Reply

Your email address will not be published. Required fields are marked *