ಬೆಳ್ಳಂಬೆಳಗ್ಗೆ ಹೊತ್ತಿ ಉರಿಯಿತು ಸೇತುವೆ ಕೆಳಗೆ ನಿಲ್ಲಿಸಿದ್ದ 20ಕ್ಕೂ ಹೆಚ್ಚು ವಾಹನ

ಮುಂಬೈ: ಬೆಳ್ಳಂಬೆಳಗ್ಗೆ ಬೋರ್ವಿಯಾಲಿಯಲ್ಲಿ ಸೇತುವೆ ಕೆಳಗೆ ನಿಲುಗಡೆ ಮಾಡಲಾಗಿದ್ದ 20 ಕ್ಕೂ ಹೆಚ್ಚು ವಾಹನಗಳು ಅಗ್ನಿ ಅವಘಡದಲ್ಲಿ ಸುಟ್ಟು ಭಸ್ಮವಾಗಿದೆ.

ಬೆಳಗ್ಗೆ ಸುಮಾರು 8 ಗಂಟೆಗೆ ಈ ಅವಘಡ ಸಂಭವಿಸಿದೆ. ಘಟನೆ ನಡೆದ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ಬೆಂಕಿ ಅನಾಹುತಕ್ಕೆ ಕಾರಣವೇನು ಎಂಬುವುದು ತಿಳಿದುಬಂದಿಲ್ಲ. ಈ ಅಗ್ನಿ ಅನಾಹುತದಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ಆದರೆ ಸೇತುವೆ ಕೆಳಗೆ ನಿಲುಗಡೆ ಮಾಡಲಾಗಿದ್ದ 20ಕ್ಕೂ ಹೆಚ್ಚು ವಾಹನಗಳು ಬೆಂಕಿ ಕೆನ್ನಾಲಿಗೆಯಲ್ಲಿ ಸುಟ್ಟು ಕರಕಲಾಗಿವೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಆಗಮಿಸಿ ವಾಹನಗಳಿಗೆ ತಗುಲಿದ್ದ ಬೆಂಕಿಯನ್ನು ನೆಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇದ್ದಕ್ಕಿದಂತೆ ಈ ಅಗ್ನಿ ಅನಾಹುತವಾಗಲು ಕಾರಣವೇನು ಎಂದು ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.

2016ರಲ್ಲಿ ಮುಂಬೈ ಹೈ ಕೋರ್ಟ್ ಫ್ಲೈಓವರ್ ಕೆಳಗೆ ವಾಹನ ನಿಲುಗಡೆ ಮಾಡುವಂತಿಲ್ಲ ಎಂದು ತೀರ್ಪು ನೀಡಿತ್ತು. ಅಲ್ಲದೇ ಮೇ 2018ರಲ್ಲಿ ಸಾರ್ವಜನಿಕರು ಮುಂಬೈ ಬೀದಿಗಳಲ್ಲಿ, ಫ್ಲೈಓವರ್ ಕೆಳಗೆ ಉಪಯೋಗ ಮಾಡದ ವಾಹನಗಳನ್ನು ನಿಲ್ಲಿಸುವುದನ್ನು ಖಂಡಿಸಿ ಆಪರೇಷನ್ ಖತಾರ ಅಭಿಯಾನವನ್ನು ಕೂಡ ಆರಂಭಿಸಿದ್ದರು. ಆಗ ಪೋಲೀಸರು ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದರು.

Comments

Leave a Reply

Your email address will not be published. Required fields are marked *