ನೆಲ್ಯಾಡಿಯಲ್ಲಿ ಬೊಲೆರೋ, ಲಾರಿ ಡಿಕ್ಕಿ – 3 ಜನ ಸ್ಥಳದಲ್ಲೇ ಸಾವು

ಮಂಗಳೂರು: ಬೊಲೆರೋ ಮತ್ತು ಲಾರಿ ಡಿಕ್ಕಿಯಾದ ಪರಿಣಾಮ 3 ಜನ ಸ್ಥಳದಲ್ಲೇ ಸಾವನ್ನಪ್ಪಿ ಓರ್ವ ಗಭೀರವಾಗಿ ಗಾಯಗೊಂಡಿರುವ ಘಟನೆ ಪುತ್ತೂರು ತಾಲೂಕಿನ ನೆಲ್ಯಾಡಿಯಲ್ಲಿ ನಡೆದಿದೆ.

ಮೃತ ದುರ್ದೈವಿಗಳನ್ನು ಸತ್ತಾರ್, ಸ್ಯಾಂಮ್ಸನ್ ಮತ್ತು ಸೈರಸ್ ಎಂದು ಗುರುತಿಸಲಾಗಿದೆ. ಜನಾರ್ದನ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಉಪ್ಪಿನಂಗಡಿಗೆ ತೆರಳುತ್ತಿದ್ದ ಬೊಲೆರೋ ಜೀಪಿಗೆ ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ನೆಲ್ಯಾಡಿಯ ಬೆಥನಿ ವಿದ್ಯಾಸಂಸ್ಥೆಯ ಬಳಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಸೋಮವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು ಡಿಕ್ಕಿಯ ರಭಸಕ್ಕೆ ಬೊಲೆರೋ ಸಂಪುರ್ಣ ನಜ್ಜುಗುಜ್ಜಾಗಿದೆ.

ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *