ಐಎಂಎ ವಂಚನೆ ಪ್ರಕರಣ: ಕಂದಾಯ ಇಲಾಖೆ ಎಸಿ ಎಲ್.ಸಿ.ನಾಗರಾಜ್ ಅರೆಸ್ಟ್

ಬೆಂಗಳೂರು: ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆಯ ಉತ್ತರ ವಿಭಾಗದ ಸಹಾಯಕ ಆಯುಕ್ತರನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಎ.ಸಿ.ನಾಗರಾಜ್ ಬಂಧಿಯ ಅಧಿಕಾರಿ. ಐಎಂಎ ಪರ ಎನ್‍ಓಸಿ ನೀಡಲು 4.5 ಕೋಟಿ ಲಂಚ ಪಡೆದಿದ್ದ ಆರೋಪದ ಮೇಲೆ ಸಹಾಯಕ ಆಯುಕ್ತ ಎ.ಸಿ.ನಾಗರಾಜ್ ಬಂಧನವಾಗಿದೆ. ತನಿಖೆ ನಡೆಸುವಾಗಲೂ ತಪ್ಪು ಮಾಹಿತಿ ನೀಡಿ ನಾಗರಾಜ್ ಸರ್ಕಾರಕ್ಕೆ ವಂಚನೆ ಮಾಡಿರುವ ಮಾಹಿತಿ ಲಭ್ಯವಾಗಿದೆ.

ಸರ್ಕಾರದಿಂದ ಎನ್‍ಓಸಿ ನೀಡುವ ಮೊದಲು 10 ಕೋಟಿ ರೂ. ಕೇಳಿದ್ದು, ಸಚಿವರೊಬ್ಬರ ಆದೇಶದ ಮೇರೆಗೆ ಹಣ ಸ್ವೀಕರಿಸಿದ್ದ ನಾಗರಾಜ್ ಕುರಿತು ಮನ್ಸೂರ್ ಖಾನ್ ಬಿಡುಗಡೆ ಮಾಡಿದ್ದ ವಿಡಿಯೋದಲ್ಲಿ ಸಹ ಹೇಳಿಕೊಂಡಿದ್ದನು. ಹಣ ನೀಡಲು ತಡವಾಗಿತ್ತು ಎಂದು ವಿಡಿಯೋದಲ್ಲಿ ಮನ್ಸೂರ್ ಖಾನ್ ಹೇಳಿದ್ದಾನೆ.

ಐಎಂಎ ವಂಚನೆ ಪ್ರಕರಣದ ಕರಿತು ಎಸ್‍ಐಟಿ ತಂಡ ಈಗಾಗಲೇ ವಜ್ರ, ಚಿನ್ನ, ಬೆಳ್ಳಿ, ಸೇರಿದಂತೆ ಐಎಂಎನ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಐಎಂಎ ಒಡೆತನದ ಫ್ರಂಟ್ ಲೈನ್ ಫಾರ್ಮಸಿಯ ನೀಲಸಂದ್ರ ಹಾಗೂ ವಿಜಯನಗರದ ಔಷಧಿ ಮಳಿಗೆಗಳ ಮೆಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 60 ಸಾವಿರ ನಗದು ಹಾಗೂ 40 ಲಕ್ಷ ರೂ. ಮೌಲ್ಯದ ಔಷಧಿ ಹಾಗೂ ವಿದ್ಯುನ್ಮಾನ ಉಪಕರಣಗಳು ಪತ್ತೆಯಾಗಿದ್ದು, ವಶಪಡಿಸಿಕೊಳ್ಳಲಾಗಿದೆ.

Comments

Leave a Reply

Your email address will not be published. Required fields are marked *