ಹಾಸನದಲ್ಲಿ ಬಂದೂಕುಧಾರಿಗಳು ಪ್ರತ್ಯಕ್ಷ – ಪೊಲೀಸರಿಂದ ಶೋಧ

ಹಾಸನ: ಜಿಲ್ಲೆಯಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಬಂದೂಕು ತೋರಿಸಿ ಬೆದರಿಕೆ ಹಾಕಿರುವ ಪ್ರಕರಣ ಕಂಡುಬಂದಿದ್ದು, ಪೊಲೀಸರು ಪಶ್ಚಿಮ ಘಟ್ಟದಲ್ಲಿ ಶೋಧಕಾರ್ಯ ಮಾಡುತ್ತಿದ್ದಾರೆ.

ಹಾಸನ ಮಂಗಳೂರು ನಡುವಿನ ರೈಲ್ವೆ ಹಳಿಯ ಯಡಕುಮೇರಿ ಬಳಿ ಪ್ರತ್ಯಕ್ಷವಾಗಿದ್ದ ಇಬ್ಬರು ಶಸ್ತ್ರಾಸ್ತ್ರಧಾರಿಗಳು, ಎರಡು ದಿನಗಳ ಹಿಂದೆ ರೈಲ್ವೆ ಸಿಬ್ಬಂದಿಗೆ ಬಂದೂಕು ತೋರಿಸಿ ಬೆದರಿಸಿದ್ದಾರೆ.

ಬಂದೂಕುದಾರಿಗಳನ್ನು ನಕ್ಸಲರೆಂಬ ಅನುಮಾನ ವ್ಯಕ್ತಪಡಿಸಿರುವ ಪೊಲೀಸರು, ಅರಣ್ಯ ಇಲಾಖೆ, ರೈಲ್ವೇ ಪೊಲೀಸ್, ಮತ್ತು ಸಕಲೇಶಪುರ ಗ್ರಾಮಾಂತರ ಪೊಲೀಸರಿಂದ ಜಂಟಿಯಾಗಿ ಕಡಗರವಳ್ಳಿ ಮತ್ತು ಯಡಕುಮೇರಿ ಭಾಗದಲ್ಲಿ ಶೋಧಕಾರ್ಯ ಮಾಡುತ್ತಿದ್ದಾರೆ.

Comments

Leave a Reply

Your email address will not be published. Required fields are marked *