ರಮೇಶ್ ಜಾರಕಿಹೊಳಿ ವಿರುದ್ಧ ಕಮೆಂಟ್-ಯೋಧನ ವಿರುದ್ಧ ದೂರು

ಬೆಳಗಾವಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಹೋಟೆಲ್‍ನಲ್ಲಿರುವ ರಮೇಶ್ ಜಾರಕಿಹೊಳಿ ವಿರುದ್ಧ ಫೇಸ್‍ಬುಕ್‍ನಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ್ದಕ್ಕೆ ಯೋಧನೊಬ್ಬನ ವಿರುದ್ಧ ದೂರು ದಾಖಲಾಗಿದೆ.

ಮೇಘಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಆರ್​ಪಿಎಫ್​  ಯೋಧ ಚರಣ್ ಎಂಬವರ ವಿರುದ್ಧ ರಮೇಶ್ ಜಾರಕಿಹೊಳಿ ಬೆಂಬಲಿಗರು ದೂರು ದಾಖಲಿಸಿದ್ದಾರೆ. ರಮೇಶ್ ಜಾರಕಿಹೊಳಿ ವಿರುದ್ಧ ಫೇಸ್‍ಬುಕ್‍ನಲ್ಲಿ ಅವಹೇಳನಕಾರಿ ಕಮೆಂಟ್, ಮಾಡಿದ್ದಾರೆ ಎಂದು ಯೋಧ ಚರಣ್ ವಿರುದ್ಧ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ರಮೇಶ್ ಜಾರಕಿಹೊಳಿ ಅವರ ಅಭಿಮಾನಿ ವಿವೇಕ್ ಪಾಟೀಲ್ ಎಂಬವರು ಪವರ್ ಆಫ್ ಅಣ್ಣಾಜಿ ಎಂದು ಬರೆದು ಜಾರಕಿಹೊಳಿ ಫೋಟೋ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಯೋಧ ಚರಣ್ ಅವಾಚ್ಯವಾಗಿ ಕಮೆಂಟ್ ಮಾಡಿದ್ದಾನೆ ಎಂದು ದೂರು ನೀಡಲಾಗಿದೆ.

Comments

Leave a Reply

Your email address will not be published. Required fields are marked *