ವೈದ್ಯರ ಎಡವಟ್ಟು – ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು

ಕಾರವಾರ: ವೈದ್ಯರ ಎಡವಟ್ಟಿನಿಂದ ಚಿಕಿತ್ಸೆ ನಿರತ ರೋಗಿ ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯ ಶ್ರೀ ಮಾರಿಕಾಂಬಾ ಆಸ್ಪತ್ರೆಯಲ್ಲಿ ನಡೆದಿದೆ.

ಶಿರಸಿ ತಾಲೂಕಿನ ಉಂಚಳ್ಳಿ ಮೂಲದ ಸಂತೋಷ್ ನಾಯ್ಕ (28) ಸಾವು ಕಂಡ ಯುವಕನಾಗಿದ್ದು, ಬೈಕ್ ಅಪಘಾತವಾದ ಕಾರಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ. ತಲೆಗೆ ಪೆಟ್ಟು ಬಿದ್ದ ಕಾರಣ ನಿನ್ನೆ ದಿನ ಶಸ್ತ್ರ ಚಿಕಿತ್ಸೆ ಮಾಡಿದ್ದ ವೈದ್ಯರು ಇಂದು ನೋವು ನಿವಾರಕ ಇಂಜೆಕ್ಷನ್ ನೀಡಿದ ಕೆಲವೇ ನಿಮಿಷದಲ್ಲಿ ಯುವಕ ಸಾವನ್ನಪ್ಪಿದ್ದಾನೆ.

ಇದರಿಂದಾಗಿ ವೈದ್ಯರ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಆಸ್ಪತ್ರೆ ಎದುರು ಸಂಬಂಧಿಕರ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಶಿರಸಿ ನಗರ ಠಾಣೆ ಪೂಲೀಸರು ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ಕಾರವಾರಕ್ಕೆ ಸಾಗಿಸಲಾಗಿದೆ.

Comments

Leave a Reply

Your email address will not be published. Required fields are marked *