ನೂತನ ಸಿಎಂ ಯಡಿಯೂರಪ್ಪಗೆ ಶುಭ ಕೋರಿದ ಸುಧಾ ಮೂರ್ತಿ

ಬೆಂಗಳೂರು: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀಮತಿ ಸುಧಾ ಮೂರ್ತಿ ಅವರು ಇಂದು ಬೆಳಗ್ಗೆ ನೂತನ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಶುಭ ಕೋರಿದ್ದಾರೆ.

ಸುಧಾ ಮೂರ್ತಿ ಅವರು ಸಿಎಂ ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಶುಭ ಕೋರಿದರು. ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ಪುತ್ರ ಬಿ.ವೈ ವಿಜಯೇಂದ್ರ ಮೊದಲಾದವರು ಉಪಸ್ಥಿತರಿದ್ದರು.

ಇದೇ ವೇಳೆ ಯಡಿಯೂರಪ್ಪ ಅವರು ಸುಧಾ ಮೂರ್ತಿ ಅವರ ಜೊತೆ ಕ್ಲಿಕ್ಕಿಸಿಕೊಂಡ ಫೋಟೋವನ್ನು ಟ್ವಿಟ್ಟರಿನಲ್ಲಿ ಹಾಕಿ ಅದಕ್ಕೆ, “ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀಮತಿ ಸುಧಾ ಮೂರ್ತಿ ಅವರು ಇಂದು ಬೆಳಿಗ್ಗೆ ನನ್ನ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಶುಭ ಕೋರಿದರು” ಎಂದು ಟ್ವೀಟ್ ಮಾಡಿಕೊಂಡಿದ್ದಾರೆ.

ಸಿಎಂ ಆಫ್ ಕರ್ನಾಟಕ ಟ್ವಿಟ್ಟರ್ ಸಹ ಸುಧಾಮೂರ್ತಿ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ಫೋಟೋಗಳನ್ನು ಹಂಚಿಕೊಂಡು ಟ್ವೀಟ್ ಮಾಡಿದೆ.

Comments

Leave a Reply

Your email address will not be published. Required fields are marked *