ಮನ್ಸೂರ್ ಖಾನ್ ಮತ್ತೆ ಎದೆ ನೋವು ಡ್ರಾಮಾ

ಬೆಂಗಳೂರು: ಬಹುಕೋಟಿ ವಂಚನೆಯ ಐಎಂಎ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಎಸ್‍ಐಟಿ ಅಧಿಕಾರಿಗಳ ವಿಚಾರಣೆ ವೇಳೆ ಮತ್ತೆ ಎದೆ ನೋವು ಎಂದು ಹೇಳಿದ್ದು, ಅಧಿಕಾರಿಗಳು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.

ಎಸ್‍ಐಟಿ ಅಧಿಕಾರಿಗಳು ಶನಿವಾರ ಮನ್ಸೂರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಪ್ರಾರಂಭಿಸಿದ್ದರು. ವಿಚಾರಣೆ ವೇಳೆ ತಡರಾತ್ರಿ ಮತ್ತೆ ಎದೆ ನೋವು ಎಂದು ಮನ್ಸೂರ್ ಖಾನ್ ಹೇಳಿದ್ದು, ನಂತರ ಅಧಿಕಾರಿಗಳು ಮನ್ಸೂರ್ ಖಾನ್ ನನ್ನು ಜಯದೇವ ಆಸ್ಪತ್ರೆಗೆ ಸೇರಿದ್ದಾರೆ. ಇದನ್ನೂ ಓದಿ: 14 ದಿನಗಳ ನ್ಯಾಯಾಂಗ ಬಂಧನಕ್ಕೆ ಮನ್ಸೂರ್ ಖಾನ್

ಡಿಸಿಪಿ ಗಿರೀಶ್ ಹಾಗೂ ಎಸಿಪಿ ಬಾಲರಾಜ್ ನೇತೃತ್ವದಲ್ಲಿ ವಿಚಾರಣೆ ಮಾಡಲಾಗುತ್ತಿತ್ತು. ವಿಚಾರಣೆ ಮಾಡುವಾಗ ರಾತ್ರಿ ಎದೆ ನೋವು ಎಂದು ಮನ್ಸೂರ್ ಖಾನ್ ಡ್ರಾಮಾ ಮಾಡಿದ್ದಾನೆ. ಬಳಿಕ ಜಯದೇವಕ್ಕೆ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ನಂತರ ಅಧಿಕಾರಿಗಳು ವಾಪಸ್ ಕರೆ ತಂದಿದ್ದಾರೆ. ಸದ್ಯ ಆರೋಪಿ ಮನ್ಸೂರ್ ಖಾನ್ ವಿಶ್ರಾಂತಿ ಪಡೆಯುತಿದ್ದಾನೆ. ಮನ್ಸೂರ್ ಜೊತೆ ತನಿಖಾಧಿಕಾರಿಗಳು ಹೊರತು ಪಡಿಸಿದರೆ ಬೇರೆ ಯಾರೊಬ್ಬರಿಗೂ ಮಾತನಾಡಲು ಅವಕಾಶ ನೀಡಿಲ್ಲ.

Comments

Leave a Reply

Your email address will not be published. Required fields are marked *