ಬ್ಯಾಗ್ ಕದ್ದವನಿಗೆ ಹಿಗ್ಗಾಮುಗ್ಗಾ ಥಳಿಸಿದ ಲೇಡಿ ಕಂಡಕ್ಟರ್

ಬೆಂಗಳೂರು: ಬ್ಯಾಗ್ ಕದ್ದು ಪರಾರಿಯಾಗುತ್ತಿದ್ದ ಖದೀಮನನ್ನು ಕೆ.ಎಸ್.ಆರ್.ಟಿ.ಸಿ ಬಸ್ಸಿನ ನಿರ್ವಾಹಕಿ ಹಿಡಿದು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಇಂದು ಸಂಜೆ ಆನೇಕಲ್ ಬಸ್ ನಿಲ್ದಾಣದಿಂದ ಬೆಂಗಳೂರು ಕಡೆಗೆ ತೆರಳಲು ಸಿದ್ಧವಾಗಿದ್ದ ಕೆ.ಎಸ್.ಆರ್.ಟಿ.ಸಿ ಎಕ್ಸ್ ಪ್ರೆಸ್ ಬಸ್‍ನ ನಿರ್ವಾಹಕಿ ಬಸ್ ನಿಲ್ದಾಣದ ಕಚೇರಿಗೆ ಎಂಟ್ರಿ ಮಾಡಿಸಲು ಹೋಗಿದ್ದಾರೆ. ಈ ಸಂದರ್ಭದಲ್ಲಿ ಬಸ್‍ನಲ್ಲಿ ಇಟ್ಟಿದ್ದ ಬ್ಯಾಗನ್ನು ಗಮನಿಸಿದ ಖದೀಮನೊಬ್ಬ ಬ್ಯಾಗ್ ಕದ್ದು ಎಸ್ಕೇಪ್ ಆಗಿದ್ದಾನೆ.

ಇದನ್ನು ಗಮಿನಿಸಿದ ಲೇಡಿ ಕಂಡಕ್ಟರ್ ಅವನನ್ನು ಹಿಂಬಾಲಿಸಿ ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಕಪಾಳಮೋಕ್ಷ ಮಾಡಿದ್ದಾರೆ. ಬ್ಯಾಗ್‍ನಲ್ಲಿ ಮೊಬೈಲ್ ಫೋನ್ ಸೇರಿದಂತೆ ಬೆಲೆ ಬಾಳುವ ವಸ್ತುಗಳಿದ್ದು, ಕಳ್ಳ ಸಂಜೆ ಶಾಲಾ ಕಾಲೇಜು ಹಾಗೂ ಕೆಲಸ ಬಿಟ್ಟ ಸಂದರ್ಭದಲ್ಲಿ ಬಸ್ ನಿಲ್ದಾಣದಲ್ಲಿ ಹೆಚ್ಚು ಜನರಿರುವುದನ್ನು ಗಮನಿಸಿ ಬ್ಯಾಗ್ ಕದ್ದು ಎಸ್ಕೇಪ್ ಆಗಲು ಮುಂದಾಗಿದ್ದಾನೆ.

ಈ ಘಟನೆ ಆನೇಕಲ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Comments

Leave a Reply

Your email address will not be published. Required fields are marked *