ಮಹಾರಾಷ್ಟ್ರ-ಕರ್ನಾಟಕದ ಸಂಪರ್ಕ ಕೊಂಡಿ NH4 ಪುನರಾರಂಭ

ಬೆಳಗಾವಿ: ವರುಣನ ಅಬ್ಬರದಿಂದಾಗಿ ಕಳೆದ ಒಂದು ವಾರದಿಂದ ಬಂದ್ ಆಗಿದ್ದ ಮಹಾರಾಷ್ಟ್ರ-ಕರ್ನಾಟಕ ಸಂಪರ್ಕ ಕೊಂಡಿ ರಾಷ್ಟ್ರೀಯ ಹೆದ್ದಾರಿ ನಾಲ್ಕು ಸಂಚಾರಕ್ಕೆ ಮುಕ್ತವಾಗಿದೆ.

ನಿಪ್ಪಾಣಿ ತಾಲೂಕಿನ ಯಮಗರ್ಣಿ ಗ್ರಾಮದ ಬಳಿ ಹರಿಯುವ ವೇದಗಂಗಾ ನದಿ ನೀರು ರಾಷ್ಟ್ರೀಯ ಹೆದ್ದಾರಿ ಮೇಲೆ ಅಪಾರ ಪ್ರಮಾಣದಲ್ಲಿ ಹರಿಯುತ್ತಿತ್ತು. ಹೀಗಾಗಿ ಕರ್ನಾಟಕ-ಮಹಾರಾಷ್ಟ್ರ ನಡುವಿನ ರಸ್ತೆ ಸಂಪರ್ಕ ಸ್ಥಗಿತಗೊಂಡಿತ್ತು. ಜೊತೆಗೆ ಭೂ ಕುಸಿತದ ಕಾರಣ ಬೆಳಗಾವಿಯಿಂದ ಕೊಲ್ಹಾಪುರದವರೆಗೆ ರಸ್ತೆ ಸಂಚಾರ ನಿಷೇಧಿಸಲಾಗಿತ್ತು.

ಮಳೆ ಹಾಗೂ ಪ್ರವಾಹ ಕಡಿಮೆಯಾಗುತ್ತಿರುವ ಪರಿಣಾಮ ವೇದಗಂಗಾ ನದಿ ನೀರಿನ ಪ್ರಮಾಣ ಇಳಿಮುಖವಾಗುತ್ತಿದೆ. ಇದರಿಂದಾಗಿ ಬೆಳಗಾವಿ-ಕೊಲ್ಹಾಪುರ ರಾಷ್ಟ್ರೀಯ ಹೆದ್ದಾರಿ ಸಂಚಾರ ಪ್ರಾರಂಭ ಮಾಡಲಾಗಿದೆ. ಸದ್ಯ ಸ್ಥಳೀಯ ಸಣ್ಣ ಪ್ರಮಾಣದ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಹಂತ ಹಂತವಾಗಿ ಬಸ್, ಲಾರಿ ಸೇರಿದಂತೆ ಭಾರೀ ಪ್ರಮಾಣದ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Comments

Leave a Reply

Your email address will not be published. Required fields are marked *