ಫೋನ್ ಕದ್ದಾಲಿಕೆ ಪ್ರಕರಣ ಸಿಬಿಐಗೆ ಹಸ್ತಾಂತರ

ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣವನ್ನು ರಾಜ್ಯ ಸರ್ಕಾರವು ಸಿಬಿಐಗೆ ಹಸ್ತಾಂತರಿಸಿ ಅಧಿಕೃತ ಆದೇಶ ಹೊರಡಿಸಿದೆ.

ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ಸಾಕ್ಷ್ಯಾಧಾರಗಳನ್ನು ಸಿಬಿಐಗೆ ವಹಿಸಬೇಕು. 2018ರ ಆಗಸ್ಟ್ 1ರಿಂದ ಇಲ್ಲಿಯವರೆಗಿನ ಫೋನ್ ಟ್ಯಾಪಿಂಗ್ ವಿವರಗಳನ್ನು ಸಲ್ಲಿಸಬೇಕು. ಆಡಳಿತ ಮತ್ತು ಪ್ರತಿ ಪಕ್ಷಗಳ ನಾಯಕರು, ಅವರ ಸಹವರ್ತಿಗಳು, ಸರ್ಕಾರಿ ನೌಕರರ ಕರೆ ವಿವರಗಳ ಸಲ್ಲಿಸಬೇಕು ಎಂದು ಗೃಹ ಇಲಾಖೆಯಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.

ಈ ಸಂಬಂಧ ಸ್ವಯಂ ಪೇರಿತವಾಗಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 72 ಐಟಿ ಆಕ್ಟ್, ಸೆಕ್ಷನ್ 26 ಇಂಡಿಯನ್ ಟೆಲಿಗ್ರಾಂ ಆಕ್ಟ್ ಅಡಿ ಪ್ರಕರಣ ದಾಖಲಿಸಿಕೊಂಡಿತ್ತು. ಈಗ ಈ ಪ್ರರಕಣವನ್ನು ರಾಜ್ಯ ಸರ್ಕಾರವು ಸಿಬಿಐಗೆ ಹಸ್ತಾಂತರಿಸಿದೆ.

ರಾಜಕಾರಣಿಗಳು, ರಾಜಕಾರಣಿಗಳ ಸಂಬಂಧಿಕರು, ಸರ್ಕಾರಿ ಅಧಿಕಾರಿಗಳ ಫೋನ್ ಟ್ಯಾಪಿಂಗ್ ಆಗಿರುವ ಬಗ್ಗೆ ದೃಢವಾಗಿದೆ. ಫೋನ್ ಟ್ಯಾಪಿಂಗ್ ಸಂಬಂಧಿಸಿದಂತೆ ದಾಖಲೆಗಳನ್ನು ಸಿಬಿಐಗೆ ಹಸ್ತಾಂತರಿಸಲು ಸಿದ್ಧವೆಂದು ಸೈಬರ್ ಕ್ರೈಂ ರಾಜ್ಯ ಸರ್ಕಾರಕ್ಕೆ ತಿಳಿಸಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Comments

Leave a Reply

Your email address will not be published. Required fields are marked *