ಮೈಸೂರು: ಸಚಿವ ವಿ. ಸೋಮಣ್ಣ ಅವರು ಮೈಸೂರು ಜಿಲ್ಲಾ ಉಸ್ತುವಾರಿಯಾಗಿ ನೇಮಕ ಆಗಿದ್ದು, ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.
ಆದೇಶ ಪತ್ರದಲ್ಲಿ, ವಿ ಸೋಮಣ್ಣ, ಮಾನ್ಯ ಸಚಿವರು, ಕರ್ನಾಟಕ ಸರ್ಕಾರ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ ಎಂದು ಆದೇಶಿಸಿದೆ.

ನೆರೆ ಬಗ್ಗೆ ಪರಿಶೀಲನೆ ಮಾಡಿ ಮಾಹಿತಿ ನೀಡುವುದಕ್ಕೆ ಆರ್. ಅಶೋಕ್ ಅವರನ್ನು ಮೈಸೂರಿನ ಉಸ್ತುವಾರಿ ಆಗಿ ಮಾಡಲಾಗಿತ್ತು. ಆಗ ಅಶೋಕ್ ಅವರೇ ಜಿಲ್ಲಾ ಉಸ್ತುವಾರಿ ಆಗುತ್ತಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಇಂದು ಬೆಳಗ್ಗೆ ದಸರಾ ಗಜಪಡೆಗೆ ಚಾಲನೆ ನೀಡುವಾಗ ಸೋಮಣ್ಣ ಅವರು ಮೈಸೂರಿನ ಉಸ್ತುವಾರಿ ಆರ್. ಅಶೋಕ್ ಆದರೆ ನನಗೆ ಸಂತೋಷ ಎಂದು ಹೇಳಿದ್ದರು. ಆದರೆ ಅಷ್ಟರಲ್ಲಿ ಸರ್ಕಾರ ವಿ. ಸೋಮಣ್ಣ ಅವರನ್ನು ಜಿಲ್ಲಾ ಉಸ್ತುವಾರಿ ಆಗಿ ನೇಮಕ ಮಾಡಿ ಆದೇಶಿಸಿದೆ. ಮುಂದಿನ ತಿಂಗಳು ದಸರಾ ಬರುತ್ತಿರುವ ಕಾರಣ ತರಾತುರಿಯಲ್ಲಿ ಸೋಮಣ್ಣ ಅವರನ್ನು ಜಿಲ್ಲಾ ಉಸ್ತುವಾರಿಯಾಗಿ ನೇಮಕ ಮಾಡಿದ್ದಾರೆ ಎನ್ನಲಾಗಿದೆ.

Leave a Reply