ವೈದ್ಯರ ನಿರ್ಲಕ್ಷ್ಯ – 9 ತಿಂಗಳ ಗರ್ಭಿಣಿ, ಮಗು ಆಸ್ಪತ್ರೆಯಲ್ಲೇ ಸಾವು

ಕೋಲಾರ: ಗಣೇಶ್ ಹೆಲ್ತ್ ಕೇರ್ ಖಾಸಗಿ ಆಸ್ಪತ್ರೆಗೆ ಡೆಲಿವರಿ ಮಾಡಿಸಲು ದಾಖಲಾಗಿದ್ದ 9 ತಿಂಗಳ ಗರ್ಭಿಣಿ ಮೃತಪಟ್ಟಿದ್ದಾರೆ.

ಕೋಲಾರ ತಾಲೂಕಿನ ಮುದುವತ್ತಿ ಗ್ರಾಮದ ನಿವಾಸಿ ಸುಧಾ(22) ಮೃತ ಗರ್ಭಿಣಿ. ಗಣೇಶ್ ಹೆಲ್ತ್ ಕೇರ್ ನ ಡಾ. ಲತಾ ಅವರ ನಿರ್ಲಕ್ಷ್ಯದಿಂದ ಸುಧಾ ಹಾಗೂ ಅವರ ಹೊಟ್ಟೆಯಲ್ಲಿದ್ದ ಮಗು ಸಾವನ್ನಪ್ಪಿದೆ ಎಂದು ಮಹಿಳೆಯ ಕುಟುಂಬ ಆರೋಪಿಸಿದೆ.

ಹೆರಿಗೆಗೆಂದು ಗಣೇಶ್ ಹೆಲ್ತ್ ಕೇರ್ ಆಸ್ಪತ್ರೆಗೆ ಸುಧಾ ಅವರು ದಾಖಲಾಗಿದ್ದರು. ಆದರೆ ಹೆರಿಗೆಗೆ ಬಂದವರು ಮಸಣ ಸೇರಿದ್ದಾರೆ. ಅವರ ಜೊತೆ ಹೊಟ್ಟೆಯಲ್ಲಿಯೇ ಶಿಶು ಕೂಡ ಮೃತಪಟ್ಟಿದೆ. ಆದರೆ ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ. ವೈದ್ಯರು ರೋಗಿಯನ್ನು ಸರಿಯಾಗಿ ತಪಾಸಣೆ ಮಾಡಿಲ್ಲ. ಬೇಜವಾಬ್ದಾರಿಯಿಂದ ಕೆಲಸ ಮಾಡಿ ಎರಡು ಜೀವವನ್ನು ಬಲಿ ಪಡೆದಿದ್ದಾರೆ ಎಂದು ಮಹಿಳೆಯ ಪೋಷಕರು, ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನ್ಯಾಯ ಸಿಗುವವರೆಗೂ ಗರ್ಭಿಣಿ ಹಾಗೂ ಶಿಶುವಿನ ಮೃತದೇಹವನ್ನು ಆಸ್ಪತ್ರೆಯಿಂದ ತೆಗೆದುಕೊಂಡು ಹೋಗಲ್ಲ ಎಂದು ಪೋಷಕರು ಹಾಗೂ ಸಂಬಂಧಿಕರು ಪಟ್ಟು ಹಿಡಿದಿದ್ದಾರೆ. ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Comments

Leave a Reply

Your email address will not be published. Required fields are marked *