ಹೆರಿಗೆಯಾದ 10 ನಿಮಿಷದಲ್ಲೇ ನವಜಾತ ಶಿಶು ಸಾವು

ಯಾದಗಿರಿ: ಸಕಾಲಕ್ಕೆ ಚಿಕಿತ್ಸೆ ಸಿಗದೆ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿದ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಜಿಲ್ಲೆಯ ಶಹಾಪುರ ತಾಲೂಕಿನ ಚಾಮನಾಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಡರಾತ್ರಿ ಹುಟ್ಟಿದ 10 ನಿಮಿಷದಲ್ಲೇ ಮಗು ಮೃತಪಟ್ಟಿದೆ. ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವನ್ನಪ್ಪಿರುವ ಆರೋಪ ಕೇಳಿಬರುತ್ತಿದೆ.

ಸುರಪುರ ತಾಲೂಕಿನ ಏವೂರ ತಾಂಡದ ಕಾಜಲ್ ಎಂಬವರು, ಸಂಜೆ ಹೆರಿಗೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಕಾಜಲ್ ಗೆ ತಡರಾತ್ರಿ ಹೆರಿಗೆಯಾಗಿತ್ತು. ಹೆರಿಗೆ ಆದ ಬಳಿಕ ನವಜಾತ ಶಿಶುವಿಗೆ ಸಕಾಲಕ್ಕೆ ನೀಡಬೇಕಾದ ಚಿಕಿತ್ಸೆ ಸಿಗದೆ ಇರುವುದಕ್ಕೆ ಹೆರಿಗೆಯಾದ ಹತ್ತೆ ನಿಮಿಷದಲ್ಲಿ ಮಗು ಸಾವನ್ನಪ್ಪಿದೆ ಎನ್ನಲಾಗುತ್ತಿದೆ.

ಕಳೆದ ಆರು ತಿಂಗಳಿಂದ ಈ ಆಸ್ಪತ್ರೆಯಲ್ಲಿ ನುರಿತ ವೈದ್ಯರೇ ಇಲ್ಲ. ಹೀಗಾಗಿ ಹೆರಿಗೆಯಾದ ಬಾಣಂತಿಗೆ ಮತ್ತು ಮಗುವಿಗೆ ಸರಿಯಾಗಿ ಆರೈಕೆ ಮಾಡುವವರಿಲ್ಲದಂತಾಗಿದೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

Comments

Leave a Reply

Your email address will not be published. Required fields are marked *