ರೌಡಿಸಂನಲ್ಲಿ ಹೆಸರು ಮಾಡಬೇಕೆಂದು ಮಚ್ಚಿನಿಂದ ಹಲ್ಲೆ ಮಾಡಿದ ಯುವಕ

ಮಂಡ್ಯ: ರೌಡಿಸಂನಲ್ಲಿ ಹೆಸರು ಮಾಡಲು ಯುವಕನೋರ್ವ ಹಾಡಹಾಗಲೇ ಲಾಂಗ್ ಹಿಡಿದು ಬೇಕರಿಗೆ ನುಗ್ಗಿ ಹಲ್ಲೆ ಮಾಡಿರುವ ಘಟನೆ ಮಂಡ್ಯ ನಗರದ ಜೈಲ್ ವೃತ್ತದ ಬೇಕರಿಯಲ್ಲಿ ನಡೆದಿದೆ.

ಹಲ್ಲೆ ಮಾಡಿದ ಯುವಕನನ್ನು ಕ್ಯಾಂತಗೆರೆಯ ನಿವಾಸಿ ನಾಗೇಶ್ ಎಂದು ಗುರುತಿಸಲಾಗಿದೆ. ಹಾಡಹಗಲೇ ಲಾಂಗ್ ಹಿಡಿದು ಬೇಕರಿಗೆ ನುಗ್ಗಿದ ಯುವಕ ಮಾಲೀಕನ ಮೇಲೆ ಹಲ್ಲೆ ಮಾಡಿದ್ದಾನೆ. ಹಲ್ಲೆಯಿಂದ ಭಯಗೊಂಡು ಮಾಲೀಕ ಒಳಗೆ ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ. ಈ ಎಲ್ಲಾ ಘಟನೆ ಬೇಕರಿಯ ಸಿ.ಸಿ ಟಿವಿಯಲ್ಲಿ ಸೆರೆಯಾಗಿದೆ.

ಘಟನೆ ಬಳಿಕ ಬೇಕರಿ ಮಾಲೀಕ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಯುವಕನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸಿದಾಗ ನಾನು ರೌಡಿಸಂನಲ್ಲಿ ಹೆಸರು ಮಾಡಬೇಕು ಎಂದು ಈ ರೀತಿ ಮಾಡಿದೆ ಎಂದು ನಾಗೇಶ್ ಹೇಳಿದ್ದಾನೆ. ಆರೋಪಿಯ ಅಸೆ ನೋಡಿ ದಂಗಾದ ಪೊಲೀಸರು ಬಂಧಿಸಿ ಆತನನ್ನು ಜೈಲಿಗಟ್ಟಿದ್ದಾರೆ. ಈ ಸಂಬಂಧ ಮಂಡ್ಯ ಪಶ್ವಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *