ಸಂಸದ ಪ್ರಜ್ವಲ್ ರೇವಣ್ಣಗೆ ಸಮನ್ಸ್

ಹಾಸನ: ಲೋಕಸಭೆ ಚುನಾವಣೆಯಲ್ಲಿ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ಆಸ್ತಿಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡಲಾಗಿದೆ ಎಂಬ ಆರೋಪ ಸಂಬಂಧ ಪತ್ರಿಕಾ ಪ್ರಕಟಣೆ ನೀಡಲಾಗಿದೆ.

ಸೆಪ್ಟಂಬರ್ 30ರಂದು ವಿಚಾರಣೆಗೆ ಹಾಜರಾಗುವಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸ್ಥಳೀಯ ಪತ್ರಿಕೆಯಲ್ಲಿ ಜಾಹೀರಾತು ಪ್ರಕಟಿಸುವ ಮೂಲಕ ಹೈಕೋರ್ಟ್ ಸಮನ್ಸ್ ಜಾರಿಗೊಳಿಸಲಾಗಿದೆ. ದೂರುದಾರ ಮಾಜಿ ಸಚಿವ ಎ.ಮಂಜು ಹಾಗೂ ವಕೀಲ ಜಿ. ದೇವರಾಜೇಗೌಡ ಅವರು ಪ್ರತ್ಯೇಕವಾಗಿ ದಾಖಲಿಸಿರುವ ಪ್ರಕರಣಗಳ ವಿಚಾರಣೆಗೆ ಸೆ.30ರಂದು ಬೆಳಗ್ಗೆ 10.30ಕ್ಕೆ ಖುದ್ದಾಗಿ ಇಲ್ಲವೇ ವಕೀಲರ ಮೂಲಕ ಹಾಜರಾಗುವಂತೆ ಹೈ ಕೋರ್ಟ್ ಸಮನ್ಸ್ ನಲ್ಲಿ ಸೂಚಿಸಲಾಗಿದೆ.

ಈ ಹಿಂದೆ ತಮಗೆ ಪ್ರಕರಣ ಸಂಬಂಧ ನ್ಯಾಯಾಲಯದ ಸಮನ್ಸ್ ತಲುಪಿಲ್ಲ ಎಂದು ಸಂಸದ ಪ್ರಜ್ವಲ್ ಹೇಳಿದ್ದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ಹೈಕೋರ್ಟ್ ಸಂಸದರಿಗೆ ಪತ್ರಿಕೆಯ ಜಾಹೀರಾತು ಮೂಲಕ ಸಮನ್ಸ್ ಜಾರಿ ಮಾಡಲು ಅನುಮತಿ ನೀಡಿತ್ತು. ಅದರಂತೆ ಸ್ಥಳೀಯ ಪತ್ರಿಕೆಯಲ್ಲಿ ಜಾಹೀರಾತು ನೀಡಲಾಗಿದೆ. ಇದರಿಂದ 30ರಂದು ಪ್ರಜ್ವಲ್ ಇಲ್ಲವೇ ಅವರ ಪರವಾಗಿ ವಕೀಲರು ನ್ಯಾಯಾಧೀಶರ ಮುಂದೆ ಹಾಜರಾಗಬೇಕು ಎಂದು ದೂರದಾರ ಹೇಳಿದ್ದಾರೆ.

Comments

Leave a Reply

Your email address will not be published. Required fields are marked *