ನನ್ನ ಮತ್ತು ಡಿಕೆಶಿ ನಡುವೆ ಯಾವುದೇ ವ್ಯವಹಾರಗಳೂ ಇಲ್ಲ – ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ನನ್ನ ಮತ್ತು ಡಿಕೆ ಶಿವಕುಮಾರ್ ಅವರ ನಡುವೆ ಯಾವುದೇ ವ್ಯವಹಾರಗಳೂ ಇಲ್ಲ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, 14 ನೇ ತಾರೀಕಿಗೆ ಬರುವಂತೆ ಇಡಿ ಸಮನ್ಸ್ ಕೊಟ್ಟಿದ್ದರು. ಆದರೆ 14 ಕ್ಕೆ ಬರುವಂತೆ ಸಾಧ್ಯವಿಲ್ಲ ಎಂದು ಹೇಳಿದ್ದೆ, ಹೀಗಾಗಿ ನಾಳೆ ಹೋಗುತ್ತಿದ್ದೇನೆ ಎಂದು ಹೇಳಿದರು.

ಈ ವಿಚಾರದಲ್ಲಿ 180 ಜನರಿಗೆ ಕರೆದಿದ್ದಾರೆ, ಅದರಲ್ಲಿ ನನ್ನನ್ನೂ ಕರೆದಿದ್ದಾರೆ. ಯಾವ ವಿಚಾರಕ್ಕೆ ಕರೆದಿದ್ದಾರೆ ಎನ್ನುವುದು ಗೊತ್ತಿಲ್ಲ. ನಾನು ಬೆಂಗಳೂರಿನಲ್ಲಿ ವಿಚಾರಣೆಗೆ ಬರುತ್ತೇನೆ. ಇಲ್ಲವೇ ಬೆಳಗಾವಿಯಲ್ಲೇ ವಿಚಾರಣೆ ನಡೆಸಿ ಎಂದು ಕೇಳಿಕೊಂಡಿದ್ದೇನೆ. ಆದರೆ ಇನ್ನೂ ಇಡಿಯಿಂದ ಉತ್ತರ ಬಂದಿಲ್ಲ ಎಂದು ತಿಳಿಸಿದರು.

ಇದೇ ವೇಳೆ ನನ್ನ ಮತ್ತು ಡಿಕೆ ಶಿವಕುಮಾರ್ ನಡುವೆ ಯಾವುದೇ ವ್ಯವಹಾರಗಳೂ ಇಲ್ಲ. ಹಾಗಿದ್ದರೂ ಯಾಕೆ ಕರೆದಿದ್ದಾರೆ ಎನ್ನುವುದು ವಿಚಾರಣೆಗೆ ಹಾಜರಾದ ಬಳಿಕ ಗೊತ್ತಾಗಬೇಕಷ್ಟೇ ಎಂದು ಹೇಳಿದರು. ಡಿಕೆ ಶಿವಕುಮಾರ್ ಅಕೌಂಟ್ ನಿಂದ ಹೆಬ್ಬಾಳ್ಕರ್‍ ಗೆ ಹಣ ವರ್ಗಾವಣೆ ಆಗಿರುವ ಬಗ್ಗೆ ಇಡಿಗೆ ದಾಖಲೆ ಲಭ್ಯವಾದ ಹಿನ್ನೆಲೆಯಲ್ಲಿ ಸಮನ್ಸ್ ಜಾರಿ ಮಾಡಿದೆ ಎನ್ನಲಾಗುತ್ತಿದೆ.

Comments

Leave a Reply

Your email address will not be published. Required fields are marked *