148 ಕೋಟಿ ವೆಚ್ಚದಲ್ಲಿ ಸಿದ್ಧಪಡಿಸಿದ ವರದಿಗೆ ಎಳ್ಳು ನೀರು ಬಿಟ್ಟ ಬಿಎಸ್‍ವೈ ಸರ್ಕಾರ?

ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ವರದಿಗೆ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಎಳ್ಳು ನೀರು ಬಿಡಲು ಮುಂದಾಗಿದೆ.

ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದವರ ಗಣತಿ ಮಾಡಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ಕಾಂತರಾಜು ನೇತೃದಲ್ಲಿ ಸಮಿತಿ ರಚನೆ ಮಾಡಲಾಗಿತ್ತು. ಕಾಂತರಾಜು ನೇತೃತ್ವದ ಸಮೀತಿ ಸತತ ನಾಲ್ಕು ವರ್ಷಗಳ ಸ್ಟಡಿ ಮಾಡಿ ವರದಿ ಸಿದ್ಧಪಡಿಸಿದೆ.

ಬರೋಬ್ಬರಿ 148 ಕೋಟಿ ವೆಚ್ಚದಲ್ಲಿ ಸಿದ್ಧಪಡಿಸಿರುವ ವರದಿಯನ್ನು ಬಿಜೆಪಿ ಸರ್ಕಾರ ಕಸದ ಬುಟ್ಟಿಗೆ ಹಾಕಲು ರೆಡಿಯಾಗಿದೆ. ಸಿದ್ಧಗೊಂಡಿರುವ ವರದಿಯನ್ನು ಸರ್ಕಾರ ಪಡೆದು ಜಾರಿಗೊಳಿಸಿದರೆ ಎಲ್ಲಾ ಜಾತಿ ಅವರಿಗೂ ಅನುಕೂಲವಾಗಲಿದೆ ಎಂದು ಹಿಂದುಳಿದ ಆಯೋಗದ ಚೇರ್ಮೆನ್ ಎಂ.ಹೆಚ್ ಕಾಂತರಾಜು ಪಬ್ಲಿಕ್ ಟಿವಿಗೆ ತಿಳಿಸಿದರು.

Comments

Leave a Reply

Your email address will not be published. Required fields are marked *