ಮೈಕೊರೆಯೋ ಚಳಿಯಲ್ಲಿ ಮಂಜಿನ ನಗರಿ ಮಂದಿಯ ಸೈಕ್ಲಿಂಗ್, ಮ್ಯಾರಥಾನ್

ಮಡಿಕೇರಿ: ಮಂಜಿನ ನಗರಿ ಹಾಗೂ ಪ್ರವಾಸಿಗರ ಸ್ವರ್ಗ ಕೊಡಗು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ವಿಶ್ವ ಪ್ರವಾಸೋದ್ಯಮ ದಿನವನ್ನು ಆಚರಿಸಲಾಯಿತು. ಮೈಕೊರೆಯುವ ಚಳಿಯಲ್ಲಿ ನೂರಾರು ಮಂದಿ ಬಹಳ ಉತ್ಸಾಹದಿಂದ ಸೈಕ್ಲಿಂಗ್, ಮ್ಯಾರಥಾನ್‍ನಲ್ಲಿ ಭಾಗಿಯಾಗಿ ಖುಷಿಪಟ್ಟರು.

ಕೊಡಗು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆಯಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ಮ್ಯಾರಥಾನ್ ಮತ್ತು ಸೈಕ್ಲಿಂಗ್ ಆಯೋಜಿಸಲಾಗಿತ್ತು. ನಗರದ ಕಾರ್ಯಪ್ಪ ವೃತ್ತದಿಂದ ಕೋಟೆ ಆವರಣದವರೆಗೆ 5 ಕಿ.ಮೀ ಸೈಕ್ಲಿಂಗ್, ಮ್ಯಾರಥಾನ್‍ಗೆ ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ ಪನ್ನೇಕರ್ ಚಾಲನೆ ನೀಡಿದರು.

ಮೈಕೊರೆಯುವ ಚಳಿಯ ನಡುವೆಯೂ ಸೈಕ್ಲಿಂಗ್ ಮತ್ತು ಮ್ಯಾರಥಾನ್ ಕಾರ್ಯಕ್ರಮದಲ್ಲಿ ನೂರಾರು ಮಂದಿ ಉತ್ಸಾಹದಿಂದ ಭಾಗವಹಿಸಿದ್ದರು. ಡಿಸಿ, ಎಸ್‌ಪಿ ಇಬ್ಬರೂ ಖುದ್ದು ಸೈಕ್ಲಿಂಗ್ ಮಾಡೋ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕೊಡಗು ಪ್ರಾಕೃತಿಕ ವಿಕೋಪ ನಡುವೆಯೂ ಕೊಡಗು ಪ್ರವಾಸೋದ್ಯಮ ಸೇಫ್ ಎನ್ನುವ ಸಂದೇಶ ಸಾರಿದರು. ಅಲ್ಲದೆ ಕೊಡಗಿಗೆ ಹೆಚ್ಚು ಹೆಚ್ಚು ಪ್ರವಾಸಿಗರು ಭೇಟಿ ನೀಡುವಂತೆ ಕರೆಯಿತ್ತರು.

Comments

Leave a Reply

Your email address will not be published. Required fields are marked *