ಅಕ್ರಮ ಸಂಬಂಧವನ್ನು ಪ್ರಶ್ನಿಸಿದ ಪ್ರೇಯಸಿಯ ಪತಿಯನ್ನೇ ಕೊಂದ

ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ಪ್ರಶ್ನಿಸಿದ್ದಕ್ಕೆ ಆಕೆಯ ಪ್ರಿಯಕರ ಪತಿಯನ್ನು ಗುಂಡಿಕ್ಕಿ ಕೊಲೆ ಮಾಡಿದ ಘಟನೆ ಆನೇಕಲ್ ತಾಲೂಕಿನ ಶ್ರೀರಾಂಪುರದಲ್ಲಿ ನಡೆದಿದೆ.

ಶ್ರೀರಾಂಪುರ ನಿವಾಸಿ ರಮೇಶ್ ಮೃತ ದುರ್ದೈವಿ. ಕೊಲೆ ಮಾಡಿದ ಆರೋಪಿಯನ್ನು ಮುನಿಯಪ್ಪ ಎಂದು ಗುರುತಿಸಲಾಗಿದೆ. ರಮೇಶ್ ಪತ್ನಿ ಹಾಗೂ ಮುನಿಯಪ್ಪನ ನಡುವೆ ಅಕ್ರಮ ಸಂಬಂಧವಿತ್ತು. ಈ ಬಗ್ಗೆ ರಮೇಶ್‍ಗೆ ತಿಳಿದು ಕೋಪದಿಂದ ತನ್ನ ಹೆಂಡತಿಯೊಂದಿಗೆ ಮುನಿಯಪ್ಪ ಸಂಬಂಧವಿರಿಸಿಕೊಂಡಿದ್ದರ ಬಗ್ಗೆ ಪ್ರಶ್ನೆ ಮಾಡಿದ್ದನು. ಈ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ ಕೂಡ ನಡೆದಿತ್ತು. ಹೀಗಾಗಿ ನಮ್ಮ ಸಂಬಂಧದ ಬಗ್ಗೆ ಬೈದುಕೊಂಡು ಓಡಾಡುತ್ತಿದ್ದಾನೆ ಎಂದು ಕೋಪಗೊಂಡ ಮುನಿಯಪ್ಪ ಸೋಮವಾರ ಮಧ್ಯರಾತ್ರಿ ರಮೇಶ್ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ.

ಸಿಂಗಲ್ ಬ್ಯಾರೆಲ್ ಗನ್‍ನಿಂದ ರಮೇಶ್ ಮೇಲೆ ಶೂಟೌಟ್ ಮಾಡಿದ್ದಾನೆ. ಬಳಿಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ರಸ್ತೆ ಮಧ್ಯೆ ರಮೇಶ್ ಮೃತದೇಹವನ್ನು ಕಂಡ ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Comments

Leave a Reply

Your email address will not be published. Required fields are marked *