ಅರಣ್ಯ ಭೂಮಿ ಒತ್ತುವರಿ – ಎಫ್‍ಡಿಎ ಅಧಿಕಾರಿ ಸತೀಶ್ ಅಮಾನತು

ಮಡಿಕೇರಿ: ಭಾಗಮಂಡಲ ಬೆಟ್ಟ ನೆಲಸಮ ಮಾಡಿ ರೆಸಾರ್ಟ್ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿಯ ಎಫ್‍ಡಿಎ ಅಧಿಕಾರಿ ಸತೀಶ್ ಅವರನ್ನು ಕೊಡಗು ಜಿಲ್ಲಾಧಿಕಾರಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ರೆಸಾರ್ಟ್ ನಿರ್ಮಿಸುವ ಉದ್ದೇಶದಿಂದ ಸತೀಶ್ ಮಡಿಕೇರಿ ತಾಲೂಕಿನ ಕೋಳಿಕಾಡು ಹಾಗೂ ಚೇರಂಗಾಲ ಗ್ರಾಮಗಳ ವ್ಯಾಪ್ತಿಯ ಸುಮಾರು 1.5 ಎಕರೆ ಬೆಟ್ಟವನ್ನು ಒತ್ತುವರಿ ಮಾಡಿ ಅರಣ್ಯ ಪ್ರದೇಶವನ್ನು ನಾಶಪಡಿಸಿದ್ದರು. ಪರಿಣಾಮ ಬೆಟ್ಟದ ತಪ್ಪಲಿನಲ್ಲಿ ಆತಂಕ ಮನೆ ಮಾಡಿತ್ತು. ಮಾಧ್ಯಮಗಳ ವರದಿ ಆಧರಿಸಿ ಕೊಡಗು ಡಿಸಿ ಕಂದಾಯ, ಅರಣ್ಯ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳಿಂದ ಜಂಟಿ ತನಿಖೆಗೆ ಆದೇಶ ನೀಡಿದ್ದರು.

ರೆಸಾರ್ಟ್‍ಗೆ ಗ್ರ್ಯಾಂಟ್ ಆಗಿದ್ದೇ ಬೇರೆ. ಸ್ವಾಧೀನಕ್ಕೆ ಪಡೆದಿದ್ದೇ ಬೇರೆ ಜಾಗ ಎಂಬುದು ಬೆಳಕಿಗೆ ಬಂದಿತ್ತು. ಸರ್ಕಾರಿ ಜಾಗದ ಬೆಟ್ಟವನ್ನು ಒತ್ತುವರಿ ಮಾಡಿ ಅಕ್ರಮ ಕಾಮಗಾರಿ ನಡೆದಿದೆ ಎಂದು ವರದಿಯಲ್ಲಿ ಸಾಬೀತಾದ ಹಿನ್ನೆಲೆಯಲ್ಲಿ ಅಧಿಕಾರಿ ಸತೀಶ್ ಅಮಾನತುಗೊಂಡಿದ್ದಾರೆ.

Comments

Leave a Reply

Your email address will not be published. Required fields are marked *