400 ಕೋಟಿಗೂ ಅಧಿಕ ಅನುದಾನಕ್ಕೆ ಸಿಎಂ ಬ್ರೇಕ್ – ಪ್ರಿಯಾಂಕ್ ಖರ್ಗೆ ಆರೋಪ

ಕಲಬುರಗಿ: ಅನುದಾನ ತಡೆಹಿಡಿಯುವ ಮೂಲಕ ಸಿಎಂ ಬಿ.ಎಸ್ ಯಡಿಯೂರಪ್ಪ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

ಕಲಬುರಗಿ ಜಿಲ್ಲೆಯ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ನೀಡಿದ 400 ಕೋಟಿಗೂ ಅಧಿಕ ಅನುದಾನಕ್ಕೆ ಬ್ರೇಕ್ ಹಾಕಲಾಗಿದ್ದು, ಸಮ್ಮಿಶ್ರ ಸರ್ಕಾರ ನೀಡಿದ್ದ ಅನುದಾನವನ್ನು ವಾಪಸ್ ಪಡೆದು ಕಮಲ ಶಾಸಕರಿರುವ ಕ್ಷೇತ್ರಕ್ಕೆ ಹಂಚಿಕೆ ಮಾಡಲಾಗುತ್ತಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದರು.

ನಮ್ಮ ಸರ್ಕಾರ ಇದ್ದ ಸಂದರ್ಭದಲ್ಲಿ ಎಲ್ಲಾ ಕ್ಷೇತ್ರಗಳಿಗೂ ಅನುದಾನ ಕೊಟ್ಟಿದ್ದೆವು. ಆದರೆ ಬಿಎಸ್‍ವೈ ಸರ್ವರಿಗೂ ಸಮಪಾಲು ಸಮಬಾಳು ಎಂದು ಹೇಳಿ ಇದೀಗ ದ್ವೇಷ ರಾಜಕಾರಣ ನಡೆಸುವುದು ಸರಿಯಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ವಿಜಯಪುರ ಜಿಲ್ಲೆಯನ್ನು 371 (ಎ) ಅಡಿ ಸೇರಿಸಲು ಬಿಡುವುದಿಲ್ಲ ಎಂದು ಡಿಸಿಎಂ ಗೋವಿಂದ ಕಾರಜೋಳ ವಿರುದ್ಧ ಸಹ ಪ್ರಿಯಾಂಕ್ ವಾಗ್ದಾಳಿ ನಡೆಸಿದರು.

Comments

Leave a Reply

Your email address will not be published. Required fields are marked *